Categories: CorruptionCrimeLatest

ಬಹುಕೋಟಿ ವಂಚನೆಗೆ ಬಿಗ್ ಟ್ವಿಸ್ಟ್! ಮಹಿಳಾ ಅಭಿವೃದ್ಧಿ ಸಂಸ್ಥೆ ಪ್ರಕರಣದಲ್ಲಿ ಇಬ್ಬರ ಬಂಧನ; ₹43.40 ಲಕ್ಷ ವಂಚನೆ ಬಯಲು

ಬಾಗಲಕೋಟೆ: ಜಿಲ್ಲೆಯ ಬೀಳಗಿ ಪಟ್ಟಣದ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೀಳಗಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ₹43.40 ಲಕ್ಷಕ್ಕೂ ಅಧಿಕ ಹಣದ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.

ಸಂಸ್ಥೆಯ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿ ದೂರು ನೀಡಿದ ಬಳಿಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ತನಿಖೆಯ ಭಾಗವಾಗಿ ಸಂಸ್ಥೆಯ ಕಚೇರಿಯಲ್ಲಿ ಶೋಧ ನಡೆಸಿದ ಅಧಿಕಾರಿಗಳು 200ಕ್ಕೂ ಹೆಚ್ಚು ರಿಜಿಸ್ಟರ್‌ಗಳು, ವಿವಿಧ ದಾಖಲೆಗಳು, ರಸೀದಿ ಪುಸ್ತಕಗಳು ಹಾಗೂ ಕಂಪ್ಯೂಟರ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಮತ್ತು ತನಿಖೆ ಮುಂದುವರಿದಿದೆ.

ಈ ಮಧ್ಯೆ, ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವ ಸಾರ್ವಜನಿಕರು ತಮ್ಮ ಬಳಿ ಇರುವ ದಾಖಲೆಗಳೊಂದಿಗೆ ಕೂಡಲೇ ಬೀಳಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮನವಿ ಮಾಡಿವೆ. ಪ್ರಕರಣದ ಸಂಪೂರ್ಣ ಜಾಲವನ್ನು ಭೇದಿಸಲು ಪೊಲೀಸರು ಇನ್ನಷ್ಟು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಹೆಂಡತಿಗಾಗಿ ಹೆತ್ತ ತಾಯಿಯನ್ನೇ ಕೊಲ್ಲಲು ಸಂಚು..! ಅತ್ತೆಯ ಮಾತಿಗೆ ಮರುಳಾಗಿ ಊಟದಲ್ಲಿ ವಿಷ ಬೆರೆಸಿದ ಪಾಪಿ ಮಗ

ಆಗ್ರಾ: ತಾಯಿ-ಮಗನ ಪವಿತ್ರ ಬಾಂಧವ್ಯವನ್ನೇ ಪ್ರಶ್ನಿಸುವಂತಹ ಬೆಚ್ಚಿಬೀಳಿಸುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ತವರಿಗೆ ತೆರಳಿದ್ದ ಪತ್ನಿಯನ್ನು…

4 hours ago

ಇನ್‌ಸ್ಟಾಗ್ರಾಮ್ ಪ್ರೀತಿಗೆ ಮರುಳಾಗಿ ಗಂಡ-ಮಕ್ಕಳನ್ನು ತೊರೆದ ಮಹಿಳೆ ಈಗ ಪಶ್ಚಾತ್ತಾಪದಲ್ಲಿ..! ಪ್ರೇಮಿಯಿಂದ ಕಿರುಕುಳ, ಕಣ್ಣೀರಿನಲ್ಲಿ ಲೈವ್ ವಿಡಿಯೋ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿಯ ಪ್ರೀತಿಗೆ ಮರುಳಾಗಿ ತನ್ನ ಗಂಡ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಮನೆ ಬಿಟ್ಟು ಹೋಗಿದ್ದ ಮಹಿಳೆಯೊಬ್ಬಳು,…

4 hours ago

ದೇವಸ್ಥಾನದ ದಾರಿಯಲ್ಲೇ ಗಂಡನ ಹತ್ಯೆಗೆ ಪತ್ನಿಯ ಸಂಚು..! ಪರ್ಸ್ ನೆಪದಲ್ಲಿ ಕರೆಸಿ ಪ್ರಿಯಕರನಿಂದ ಕೊಲೆ; ಸಿಸಿಟಿವಿಯಿಂದ ಬಯಲಾದ ರಹಸ್ಯ

ದೇವಸ್ಥಾನಕ್ಕೆ ಹೋಗುವ ನೆಪದಲ್ಲಿ ಪತಿಯನ್ನೇ ಮರಣದ ಬಲೆಗೆ ಬೀಳಿಸಿ, ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿಸಿರುವ…

4 hours ago

ಬಂಟ್ವಾಳ ಬಸ್ ನಿಲ್ದಾಣದಲ್ಲೇ ಯುವತಿಯ ಬರ್ಬರ ಹತ್ಯೆ..! ಸಾರ್ವಜನಿಕರ ಎದುರೇ ಕತ್ತಿಯಿಂದ ದಾಳಿ; ಪ್ರೀತಿ ನಿರಾಕರಣೆಯ ಶಂಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಾಡುಹಗಲೇ ನಡೆದ ಭೀಕರ ಹತ್ಯೆ ಇಡೀ ಕರಾವಳಿಯನ್ನೇ…

4 hours ago

ನಕಲಿ ದಾಖಲೆ ಸೃಷ್ಟಿಸಿ ಚಿಕ್ಕದೇವಮ್ಮ ಬೆಟ್ಟದ ತಪ್ಪಲಿನಲ್ಲಿ ಬಾರ್ ಆರಂಭ ಆರೋಪ: ತೆರವಿಗೆ ಭಕ್ತರ ಒತ್ತಾಯ

ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಶ್ರೀ ಚಿಕ್ಕದೇವಮ್ಮ ಬೆಟ್ಟದ ತಪ್ಪಲಿನಲ್ಲಿ ನಕಲಿ ದಾಖಲೆಗಳನ್ನು…

12 hours ago

ರೆಸ್ಟೋ ಬಾರ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ ಆರೋಪ; ಯೂಟ್ಯೂಬರ್ ‘ಅಮುಕು ಡುಮುಕು’ ಮಂಜು ವಿರುದ್ಧ FIR ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ 'ಅಮುಕು ಡುಮುಕು' ಹೆಸರಿನಿಂದ ಪರಿಚಿತರಾಗಿರುವ ಯೂಟ್ಯೂಬರ್ ಮಂಜು ವಿರುದ್ಧ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ…

15 hours ago