ಮಧ್ಯಪ್ರದೇಶದ ಮೊರೆನಾದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ಬಳಿಕ, ಆತನ ಹೆಣ್ಣುಮಕ್ಕಳು ಆತನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ಮನಕಲಕುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತನನ್ನು ಹರೇಂದ್ರ ಮೌರ್ಯ ಎಂದು ಗುರುತಿಸಲಾಗಿದ್ದು, ಆತ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅವನಿಗೆ ಮೂರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗನಿದ್ದನು. ನೆರೆಹೊರೆಯವರು ಮತ್ತು ಸಂಬಂಧಿಕರ ಪ್ರಕಾರ, ಹರೇಂದ್ರ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ.
ಮಾರ್ಚ್ 1 ರಂದು, ತನ್ನ ಇಬ್ಬರು ಹೆಣ್ಣುಮಕ್ಕಳ ಮದುವೆಯನ್ನು ಆಯೋಜಿಸಿದ್ದ. ಆದರೆ, ಮದುವೆಯ ನಂತರ ಪತ್ನಿ ವಿಚ್ಛೇದನ ನೀಡಿ ತಂದೆ ಮನೆಗೆ ಹೋಗುವುದಾಗಿ ಹೇಳಿದ್ದಳು. ಇದರಿಂದ ಮಾನಸಿಕವಾಗಿ ನೊಂದ ಹರೇಂದ್ರ ಒಂದು ಕೋಣೆಯಲ್ಲಿ ತನ್ನನ್ನು ತಾನೇ ಬೀಗಿಟ್ಟುಕೊಂಡಿದ್ದ. ಆತ ಹೊರಗೆ ಬಾರದಿದ್ದಾಗ, ಕುಟುಂಬಸ್ಥರು ಹುಡುಕತೊಡಗಿದರು. ಕೊನೆಗೂ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.
ಹರೇಂದ್ರನ ಸಾವಿನ ಕುರಿತು ಎರಡೂ ದಿಕ್ಕಿನ ಆರೋಪಗಳು ಕೇಳಿಬಂದಿವೆ. ನೆರೆಹೊರೆಯವರು ಆತ ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರೆ, ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ, ಫೆಬ್ರವರಿ 1ರಂದು ನಡೆದಿರುವ ಒಂದು ಭೀಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ಹರೇಂದ್ರನ ಪತ್ನಿ ಆತನ ಕಾಲು ಹಿಡಿದುಕೊಂಡಿರುವುದು ಹಾಗೂ ಹೆಣ್ಣುಮಕ್ಕಳು ಆತನನ್ನು ಕೋಲಿನಿಂದ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆತ ನೋವಿನಿಂದ ಕಿರುಚುತ್ತಿರುವುದು ಹಾಗೂ ಮಗ ಹೊಡೆಯುವುದನ್ನು ತಪ್ಪಿಸಲು ಯತ್ನಿಸುತ್ತಿರುವುದು ಈ ದೃಶ್ಯದಲ್ಲಿ ಕಾಣಿಸಿಕೊಂಡಿದೆ.
ಈ ವೀಡಿಯೊ ವೈರಲ್ ಆಗುತ್ತಿದ್ದಂತೆ, ಹಲವಾರು ಜನ ಆ ವ್ಯಕ್ತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹರೇಂದ್ರನ ಶವವನ್ನು ಗ್ವಾಲಿಯರ್ ವೈದ್ಯಕೀಯ ಕಾಲೇಜಿಗೆ ಶವಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಾಲಿ ಚಂದೋರಿಯಾ ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…