ಮಧ್ಯಪ್ರದೇಶದ ಮೊರೆನಾದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ಬಳಿಕ, ಆತನ ಹೆಣ್ಣುಮಕ್ಕಳು ಆತನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ಮನಕಲಕುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತನನ್ನು ಹರೇಂದ್ರ ಮೌರ್ಯ ಎಂದು ಗುರುತಿಸಲಾಗಿದ್ದು, ಆತ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅವನಿಗೆ ಮೂರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗನಿದ್ದನು. ನೆರೆಹೊರೆಯವರು ಮತ್ತು ಸಂಬಂಧಿಕರ ಪ್ರಕಾರ, ಹರೇಂದ್ರ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ.
ಮಾರ್ಚ್ 1 ರಂದು, ತನ್ನ ಇಬ್ಬರು ಹೆಣ್ಣುಮಕ್ಕಳ ಮದುವೆಯನ್ನು ಆಯೋಜಿಸಿದ್ದ. ಆದರೆ, ಮದುವೆಯ ನಂತರ ಪತ್ನಿ ವಿಚ್ಛೇದನ ನೀಡಿ ತಂದೆ ಮನೆಗೆ ಹೋಗುವುದಾಗಿ ಹೇಳಿದ್ದಳು. ಇದರಿಂದ ಮಾನಸಿಕವಾಗಿ ನೊಂದ ಹರೇಂದ್ರ ಒಂದು ಕೋಣೆಯಲ್ಲಿ ತನ್ನನ್ನು ತಾನೇ ಬೀಗಿಟ್ಟುಕೊಂಡಿದ್ದ. ಆತ ಹೊರಗೆ ಬಾರದಿದ್ದಾಗ, ಕುಟುಂಬಸ್ಥರು ಹುಡುಕತೊಡಗಿದರು. ಕೊನೆಗೂ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.
ಹರೇಂದ್ರನ ಸಾವಿನ ಕುರಿತು ಎರಡೂ ದಿಕ್ಕಿನ ಆರೋಪಗಳು ಕೇಳಿಬಂದಿವೆ. ನೆರೆಹೊರೆಯವರು ಆತ ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರೆ, ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ, ಫೆಬ್ರವರಿ 1ರಂದು ನಡೆದಿರುವ ಒಂದು ಭೀಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ಹರೇಂದ್ರನ ಪತ್ನಿ ಆತನ ಕಾಲು ಹಿಡಿದುಕೊಂಡಿರುವುದು ಹಾಗೂ ಹೆಣ್ಣುಮಕ್ಕಳು ಆತನನ್ನು ಕೋಲಿನಿಂದ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆತ ನೋವಿನಿಂದ ಕಿರುಚುತ್ತಿರುವುದು ಹಾಗೂ ಮಗ ಹೊಡೆಯುವುದನ್ನು ತಪ್ಪಿಸಲು ಯತ್ನಿಸುತ್ತಿರುವುದು ಈ ದೃಶ್ಯದಲ್ಲಿ ಕಾಣಿಸಿಕೊಂಡಿದೆ.
ಈ ವೀಡಿಯೊ ವೈರಲ್ ಆಗುತ್ತಿದ್ದಂತೆ, ಹಲವಾರು ಜನ ಆ ವ್ಯಕ್ತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹರೇಂದ್ರನ ಶವವನ್ನು ಗ್ವಾಲಿಯರ್ ವೈದ್ಯಕೀಯ ಕಾಲೇಜಿಗೆ ಶವಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಾಲಿ ಚಂದೋರಿಯಾ ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…