ಮಧ್ಯಪ್ರದೇಶದ ಮೊರೆನಾದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ಬಳಿಕ, ಆತನ ಹೆಣ್ಣುಮಕ್ಕಳು ಆತನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ಮನಕಲಕುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತನನ್ನು ಹರೇಂದ್ರ ಮೌರ್ಯ ಎಂದು ಗುರುತಿಸಲಾಗಿದ್ದು, ಆತ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅವನಿಗೆ ಮೂರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗನಿದ್ದನು. ನೆರೆಹೊರೆಯವರು ಮತ್ತು ಸಂಬಂಧಿಕರ ಪ್ರಕಾರ, ಹರೇಂದ್ರ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ.
ಮಾರ್ಚ್ 1 ರಂದು, ತನ್ನ ಇಬ್ಬರು ಹೆಣ್ಣುಮಕ್ಕಳ ಮದುವೆಯನ್ನು ಆಯೋಜಿಸಿದ್ದ. ಆದರೆ, ಮದುವೆಯ ನಂತರ ಪತ್ನಿ ವಿಚ್ಛೇದನ ನೀಡಿ ತಂದೆ ಮನೆಗೆ ಹೋಗುವುದಾಗಿ ಹೇಳಿದ್ದಳು. ಇದರಿಂದ ಮಾನಸಿಕವಾಗಿ ನೊಂದ ಹರೇಂದ್ರ ಒಂದು ಕೋಣೆಯಲ್ಲಿ ತನ್ನನ್ನು ತಾನೇ ಬೀಗಿಟ್ಟುಕೊಂಡಿದ್ದ. ಆತ ಹೊರಗೆ ಬಾರದಿದ್ದಾಗ, ಕುಟುಂಬಸ್ಥರು ಹುಡುಕತೊಡಗಿದರು. ಕೊನೆಗೂ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.
ಹರೇಂದ್ರನ ಸಾವಿನ ಕುರಿತು ಎರಡೂ ದಿಕ್ಕಿನ ಆರೋಪಗಳು ಕೇಳಿಬಂದಿವೆ. ನೆರೆಹೊರೆಯವರು ಆತ ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರೆ, ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ, ಫೆಬ್ರವರಿ 1ರಂದು ನಡೆದಿರುವ ಒಂದು ಭೀಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ಹರೇಂದ್ರನ ಪತ್ನಿ ಆತನ ಕಾಲು ಹಿಡಿದುಕೊಂಡಿರುವುದು ಹಾಗೂ ಹೆಣ್ಣುಮಕ್ಕಳು ಆತನನ್ನು ಕೋಲಿನಿಂದ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆತ ನೋವಿನಿಂದ ಕಿರುಚುತ್ತಿರುವುದು ಹಾಗೂ ಮಗ ಹೊಡೆಯುವುದನ್ನು ತಪ್ಪಿಸಲು ಯತ್ನಿಸುತ್ತಿರುವುದು ಈ ದೃಶ್ಯದಲ್ಲಿ ಕಾಣಿಸಿಕೊಂಡಿದೆ.
ಈ ವೀಡಿಯೊ ವೈರಲ್ ಆಗುತ್ತಿದ್ದಂತೆ, ಹಲವಾರು ಜನ ಆ ವ್ಯಕ್ತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹರೇಂದ್ರನ ಶವವನ್ನು ಗ್ವಾಲಿಯರ್ ವೈದ್ಯಕೀಯ ಕಾಲೇಜಿಗೆ ಶವಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಾಲಿ ಚಂದೋರಿಯಾ ತಿಳಿಸಿದ್ದಾರೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…