ನಗರದ ಕೆಪಿಟಿಸಿಎಲ್ ಕಚೇರಿ ಬಳಿಯ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದ್ದು, ಅಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಸುಮಾರಿಗೆ ಬೆಳಿಗ್ಗೆ 4 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಸಾವಿಗೀಡಾದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಅನುಮಾನ ಮೂಡಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ಬೆಸ್ಕಾಂ ಸಿಬ್ಬಂದಿಗಳೂ ಕಾರ್ಯ ನಿರ್ವಹಿಸಿದ್ದು, ಅವರು ಮೃತದೇಹವನ್ನು ಟ್ರಾನ್ಸ್ಫಾರ್ಮರ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಪ್ರಕರಣ ಸಂಬಂಧ ನಗರಠಾಣೆಯಲ್ಲಿ ದೂರು ದಾಖಲಾಗಿದ್ದು, ವ್ಯಕ್ತಿಯ ನಿಖರ ಗುರುತು ಹಾಗೂ ಸಾವಿನ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related News

error: Content is protected !!