Crime

ಮಂಡ್ಯ ಅನಾಥಾಶ್ರಮ ವಿಷಾಹಾರ ಪ್ರಕರಣ: ತನಿಖೆ ಚುರುಕು, ಹೋಟೆಲ್ ಮಾಲೀಕನ ಮೇಲಿನ ದ್ವೇಷವೇ ಕಾರಣ?

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಹೊಸ ತಿರುವು ದೊರಕಿದೆ. ಆಹಾರ ತಯಾರಿಸಿದ ಹೋಟೆಲ್‌ನಲ್ಲೇ ವಿಷಕಾರಿ ಅಂಶ ಮಿಶ್ರಣ ಮಾಡಿರುವ ಸಾಧ್ಯತೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಹೋಟೆಲ್ ಮಾಲೀಕನ ವಿರುದ್ಧದ ದ್ವೇಷವೇ ಕೃತ್ಯಕ್ಕೆ ಕಾರಣ?

ಪ್ರಾಥಮಿಕ ತನಿಖೆಯಲ್ಲಿ ಕಿಡಿಗೇಡಿಗಳು ಜಾಣಯಂತ್ರವಾಗಿ ಆಹಾರದಲ್ಲಿ ವಿಷಕಾರಿ ಪದಾರ್ಥ ಮಿಶ್ರಣ ಮಾಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಅಡುಗೆಗೆ ಬಳಸಿದ ನೀರು ಅಥವಾ ಆಹಾರ ಪದಾರ್ಥಗಳಲ್ಲಿ ವಿಷ ಮಿಶ್ರಣ ಮಾಡಿರುವ ಸಾಧ್ಯತೆ ಇದೆ. ಹೋಟೆಲ್ ಮಾಲೀಕ ಸಿದ್ದರಾಜು ಅವರ ಮೇಲಿನ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಿಸಿಟಿವಿ ದೃಶ್ಯಗಳ ಪರಿಶೀಲನೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹೋಟೆಲ್‌ನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದು ತಪಾಸಣೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದಲ್ಲಿ ತನಿಖೆ ಮುಂದುವರಿಯುತ್ತಿದ್ದು, ಶೀಘ್ರವೇ ದೋಷಿಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.

ನಡೆದಿದ್ದೇನು?

  • ಹೋಳಿ ಹಬ್ಬದ ಅಂಗವಾಗಿ ಉದ್ಯಮಿಯೊಬ್ಬರು ಬಾತ್ ಆರ್ಡರ್ ನೀಡಿದ್ದರು.
  • ಅತಿಥಿಗಳಿಗೆ ಆಹಾರ ನೀಡಿದ ಬಳಿಕ ಉಳಿದ ಆಹಾರವನ್ನು ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಕಳುಹಿಸಲಾಯಿತು.
  • ಆಹಾರ ಸೇವಿಸಿದ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡರು, ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಒಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
  • ನಂತರ ಮತ್ತೊಬ್ಬ ವಿದ್ಯಾರ್ಥಿಯೂ ಸಾವಿಗೀಡಾದರು.
  • ಅತಿಥಿಗಳಾಗಿ ಬಂದು ಆಹಾರ ಸೇವಿಸಿದ್ದ ಕೆಲವರೂ ಅಸ್ವಸ್ಥರಾಗಿದ್ದರು, ಇದರಿಂದ ವಿಷಾಹಾರದ ಅನುಮಾನ ಮತ್ತಷ್ಟು ಬಲವಾಯಿತು.

ಪೂರ್ಣ ವರದಿ ಬರುವ ನಿರೀಕ್ಷೆ

  • ಫುಡ್ ಪಾಯ್ಸನಿಂಗ್ ಕಾರಣವನ್ನು ದೃಢಪಡಿಸಲು, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದೆ.
  • ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
  • ಒಂದು ವೇಳೆ ಆಹಾರದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದರೆ, ಕ್ರಿಮಿನಲ್ ಮೊಕದ್ದಮೆ ದಾಖಲಾಗುವ ಸಾಧ್ಯತೆ ಇದೆ.

ಈ ಘಟನೆ ಮಕ್ಕಳ ಜೀವದೊಂದಿಗೆ ಆಟವಾಡಿದ ಭೀಕರ ಪ್ರಕರಣ ಎಂದು ಪರಿಗಣಿಸಲಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

38 minutes ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

40 minutes ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

41 minutes ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

24 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

24 hours ago