ಮಂಗಳೂರು: ವಿವಾದಾತ್ಮಕ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿಗಳಿಗೆ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಂಟು ಇತ್ತು ಎಂಬ ವಿಚಾರಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸ್ಪಷ್ಟತೆ ನೀಡಿದೆ.
ಎನ್ಐಎ ನಡೆಸುತ್ತಿರುವ ತನಿಖೆಯ ಪ್ರಾಥಮಿಕ ವರದಿಯಂತೆ, ಹತ್ಯೆಗೂ ಮುನ್ನ ಹಾಗೂ ನಂತರ ಕೆಲವು ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ ಅನುಮಾನಾಸ್ಪದ ಹಣ ವರ್ಗಾವಣೆ ನಡೆದಿದೆ. ಈ ಹಣ ಪಿಎಫ್ಐ ಮೂಲಕವೇ ಹರಿದಿರುವ ಸಾಧ್ಯತೆಯಿರುವುದಾಗಿ ಶಂಕಿಸಲಾಗಿದೆ.
ಬಂಧಿತರಾದ 12 ಮಂದಿ ಆರೋಪಿಗಳ ಬ್ಯಾಂಕ್ ಲೆಕ್ಕಗಳನ್ನು ಪರಿಶೀಲಿಸಿದಾಗ, ದೇಶ ವಿದೇಶಗಳಿಂದ ಬರುವ ಹಣದ ಜಾಡುಗಳು ದೃಢಪಟ್ಟಿದ್ದು, ಈ ಹಣಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗಿದ್ದೇಕೆ ಎಂಬುದರ ಬಗ್ಗೆ ಎನ್ಐಎ ಗಂಭೀರ ತನಿಖೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ‘ಫಂಡಿಂಗ್ ನೆಟ್ವರ್ಕ್’ ಅಥವಾ ಹಣದ ಮೂಲವನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಆರೋಪಿಗಳ ಸಂಪರ್ಕವನ್ನು ಖಚಿತಪಡಿಸಲು ಅವರ ಸಾಮಾಜಿಕ ಮಾಧ್ಯಮ, ಕಾಲ್ ರೆಕಾರ್ಡ್, ಬ್ಯಾಂಕ್ ಸ್ಟೇಟ್ಮೆಂಟ್ ಮತ್ತು ಇಮೇಲ್ ಹಿಸ್ಟರಿಗಳನ್ನು ಜಪ್ತಿ ಮಾಡಲಾಗಿದೆ.
ಈ ಹತ್ಯೆ ತಂತ್ರದ ಹಿಂದೆ ಬೃಹತ್ ಸಂಚು ಇದ್ದಂತೆ ಕಂಡುಬರುತ್ತಿದ್ದು, ಪ್ರಕರಣವು ಕೇವಲ ವೈಯಕ್ತಿಕ ದ್ವೇಷವಲ್ಲ, ಬದಲಿಗೆ ಒಂದು ಸಂಘಟಿತ ಯೋಜನೆಯ ಭಾಗವಾಗಿರುವ ಶಂಕೆ ಹೆಚ್ಚಾಗಿದೆ.
ಹೀಗಾಗಿ, ಈಗಾಗಲೇ ನಿಷೇಧಿತ ಪಿಎಫ್ಐ ತೀವ್ರ ನಿಗಾಧೆಯಡಿಯಲ್ಲಿ ಇರುವ ಹಿನ್ನೆಲೆಯಲ್ಲಿ, ಈ ಹೊಸ ಬೆಳವಣಿಗೆ ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಲು ಎನ್ಐಎ ಸಜ್ಜಾಗಿದೆ.
ಪೂರ್ಣ ಸತ್ಯ ಬೆಳಕಿಗೆ ಬರಲು ಇನ್ನಷ್ಟು ದಿನಗಳು ಬೇಕಾಗಬಹುದಾದರೂ, ಈಗಾಗಲೇ ಬೆಳಕಿಗೆ ಬಂದ ಮಾಹಿತಿಗಳು ಪ್ರಕರಣದ ಗಂಭೀರತೆಯನ್ನು ವ್ಯಕ್ತಪಡಿಸುತ್ತಿವೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…