ಮಂಗಳೂರು: ವಿವಾದಾತ್ಮಕ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿಗಳಿಗೆ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಂಟು ಇತ್ತು ಎಂಬ ವಿಚಾರಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸ್ಪಷ್ಟತೆ ನೀಡಿದೆ.
ಎನ್ಐಎ ನಡೆಸುತ್ತಿರುವ ತನಿಖೆಯ ಪ್ರಾಥಮಿಕ ವರದಿಯಂತೆ, ಹತ್ಯೆಗೂ ಮುನ್ನ ಹಾಗೂ ನಂತರ ಕೆಲವು ಆರೋಪಿಗಳ ಬ್ಯಾಂಕ್ ಖಾತೆಗಳಲ್ಲಿ ಅನುಮಾನಾಸ್ಪದ ಹಣ ವರ್ಗಾವಣೆ ನಡೆದಿದೆ. ಈ ಹಣ ಪಿಎಫ್ಐ ಮೂಲಕವೇ ಹರಿದಿರುವ ಸಾಧ್ಯತೆಯಿರುವುದಾಗಿ ಶಂಕಿಸಲಾಗಿದೆ.
ಬಂಧಿತರಾದ 12 ಮಂದಿ ಆರೋಪಿಗಳ ಬ್ಯಾಂಕ್ ಲೆಕ್ಕಗಳನ್ನು ಪರಿಶೀಲಿಸಿದಾಗ, ದೇಶ ವಿದೇಶಗಳಿಂದ ಬರುವ ಹಣದ ಜಾಡುಗಳು ದೃಢಪಟ್ಟಿದ್ದು, ಈ ಹಣಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಕೆಯಾಗಿದ್ದೇಕೆ ಎಂಬುದರ ಬಗ್ಗೆ ಎನ್ಐಎ ಗಂಭೀರ ತನಿಖೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ‘ಫಂಡಿಂಗ್ ನೆಟ್ವರ್ಕ್’ ಅಥವಾ ಹಣದ ಮೂಲವನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವೊಂದನ್ನು ರಚಿಸಲಾಗಿದೆ. ಆರೋಪಿಗಳ ಸಂಪರ್ಕವನ್ನು ಖಚಿತಪಡಿಸಲು ಅವರ ಸಾಮಾಜಿಕ ಮಾಧ್ಯಮ, ಕಾಲ್ ರೆಕಾರ್ಡ್, ಬ್ಯಾಂಕ್ ಸ್ಟೇಟ್ಮೆಂಟ್ ಮತ್ತು ಇಮೇಲ್ ಹಿಸ್ಟರಿಗಳನ್ನು ಜಪ್ತಿ ಮಾಡಲಾಗಿದೆ.
ಈ ಹತ್ಯೆ ತಂತ್ರದ ಹಿಂದೆ ಬೃಹತ್ ಸಂಚು ಇದ್ದಂತೆ ಕಂಡುಬರುತ್ತಿದ್ದು, ಪ್ರಕರಣವು ಕೇವಲ ವೈಯಕ್ತಿಕ ದ್ವೇಷವಲ್ಲ, ಬದಲಿಗೆ ಒಂದು ಸಂಘಟಿತ ಯೋಜನೆಯ ಭಾಗವಾಗಿರುವ ಶಂಕೆ ಹೆಚ್ಚಾಗಿದೆ.
ಹೀಗಾಗಿ, ಈಗಾಗಲೇ ನಿಷೇಧಿತ ಪಿಎಫ್ಐ ತೀವ್ರ ನಿಗಾಧೆಯಡಿಯಲ್ಲಿ ಇರುವ ಹಿನ್ನೆಲೆಯಲ್ಲಿ, ಈ ಹೊಸ ಬೆಳವಣಿಗೆ ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಲು ಎನ್ಐಎ ಸಜ್ಜಾಗಿದೆ.
ಪೂರ್ಣ ಸತ್ಯ ಬೆಳಕಿಗೆ ಬರಲು ಇನ್ನಷ್ಟು ದಿನಗಳು ಬೇಕಾಗಬಹುದಾದರೂ, ಈಗಾಗಲೇ ಬೆಳಕಿಗೆ ಬಂದ ಮಾಹಿತಿಗಳು ಪ್ರಕರಣದ ಗಂಭೀರತೆಯನ್ನು ವ್ಯಕ್ತಪಡಿಸುತ್ತಿವೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…