ಮಂಗಳೂರಿನ ಉಳ್ಳಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟು 12 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಮಧುರೈ ಸಮೀಪ ಬಂಧಿಸಿದ್ದಾರೆ.
ಬಂಧಿತರನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಮತ್ತು ಮಣಿವಣ್ಣನ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ ವಿವಿಧ ಪ್ರದೇಶಗಳಿಂದ ಈ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಗೋಣಿಚೀಲಗಳು, ತಲ್ವಾರ್, ಮತ್ತು 2 ಪಿಸ್ತೂಲ್ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರು ತಮಿಳುನಾಡಿನ ತಿರುನೆಲ್ವೇಲಿ ಮೂಲದವರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಜನವರಿ 17 ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಳದ ಕೆ.ಸಿ.ರೋಡ್ನಲ್ಲಿ ಇರುವ ಸಹಕಾರಿ ಬ್ಯಾಂಕ್ಗೆ ಮಧ್ಯಾಹ್ನದ ವೇಳೆ ಖದೀಮರ ಗುಂಪು ನುಗ್ಗಿ ಸುಮಾರು 12 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿತ್ತು.
ಘಟನೆಯ ನಂತರ ಆರೋಪಿಗಳು ಮಹಾರಾಷ್ಟ್ರದ ಕಾರು ಬಳಸಿಕೊಂಡು ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿಯಾಗಿದ್ದರು.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…