Latest

ಮಂಗಳೂರಿನ ಗುಂಪು ಹಲ್ಲೆ ಪ್ರಕರಣ: ಪೊಲೀಸ್ ನಿರ್ಲಕ್ಷ್ಯಕ್ಕೆ ಮೂವರು ಅಮಾನತು, 23 ಮಂದಿ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಕುಡುಪು ಬಳಿ ನಡೆದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಗುಂಪು ಹಲ್ಲೆಯಾದ ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರ ಕ್ರಮ ಪ್ರಶ್ನೆಗೆ ಒಳಪಟ್ಟಿದ್ದು, ಈಗ ಮೂರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಆರಂಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ “ಅಸಹಜ ಸಾವು” ಎಂದು ಪ್ರಕರಣ ದಾಖಲಿಸಲಾಗಿತ್ತು. ಆದರೆ ಮೃತನ ಮೇಲೆ ಸ್ಪಷ್ಟವಾದ ಗಾಯಗಳಿರುವುದು ದೃಢಪಟ್ಟಿದ್ದು, ನಂತರವೇ ಕೊಲೆ ಪ್ರಕರಣವಾಗಿ ಎಫ್ಐಆರ್ ದಾಖಲಿಸಲಾಯಿತು. ಘಟನೆ ಕಡೆಗೂ ರಾಜಕೀಯ ಮತ್ತು ಸಾಮಾಜಿಕ ತೀವ್ರತೆ ಪಡೆದ ಬೆನ್ನಲ್ಲೇ ಪೊಲೀಸ್ ಇಲಾಖೆ ವಿರುದ್ಧ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಮಾಹಿತಿಯನ್ನು ನೀಡಿದ್ದಾರೆ.

ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಪ್ರಾಥಮಿಕವಾಗಿ ಘಟನೆಗೆ ಸೂಕ್ತ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ, ಅಸಹಜ ಸಾವು ಎಂದು ಕೇವಲ ದಾಖಲೆ ಮುಗಿಸಲು ಯತ್ನಿಸಿದ್ದಾರನ್ನೂ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಇನ್ಸ್ಪೆಕ್ಟರ್ ವಿರುದ್ಧ ತ್ವರಿತ ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 23 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿರುವಂತೆ, ಮತ್ತಷ್ಟು ಬೆಳವಣಿಗೆಗಳ ನಿರೀಕ್ಷೆಯಿದೆ.

ಘಟನೆಯ ಹಿಂದಿನ ನಿಖರ ಕಾರಣ, ಘೋಷಣೆಗಳ ಭೂಮಿಕೆ ಮತ್ತು ಶಹೀನಬಾಗ್ ಪ್ರಭಾವದಂತ ಅಂಶಗಳ ಕುರಿತು ತನಿಖೆ ಆರಂಭವಾಗಿದೆ. ರಾಜ್ಯದ ಮಾನವ ಹಕ್ಕುಗಳ ಆಯೋಗವೂ ಈ ಪ್ರಕರಣವನ್ನು ಗಮನಕ್ಕೆ ತೆಗೆದುಕೊಂಡಿರುವ ಸಾಧ್ಯತೆ ಇದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

6 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago