ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಕುಡುಪು ಬಳಿ ನಡೆದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಗುಂಪು ಹಲ್ಲೆಯಾದ ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರ ಕ್ರಮ ಪ್ರಶ್ನೆಗೆ ಒಳಪಟ್ಟಿದ್ದು, ಈಗ ಮೂರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಆರಂಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ “ಅಸಹಜ ಸಾವು” ಎಂದು ಪ್ರಕರಣ ದಾಖಲಿಸಲಾಗಿತ್ತು. ಆದರೆ ಮೃತನ ಮೇಲೆ ಸ್ಪಷ್ಟವಾದ ಗಾಯಗಳಿರುವುದು ದೃಢಪಟ್ಟಿದ್ದು, ನಂತರವೇ ಕೊಲೆ ಪ್ರಕರಣವಾಗಿ ಎಫ್ಐಆರ್ ದಾಖಲಿಸಲಾಯಿತು. ಘಟನೆ ಕಡೆಗೂ ರಾಜಕೀಯ ಮತ್ತು ಸಾಮಾಜಿಕ ತೀವ್ರತೆ ಪಡೆದ ಬೆನ್ನಲ್ಲೇ ಪೊಲೀಸ್ ಇಲಾಖೆ ವಿರುದ್ಧ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಮಾಹಿತಿಯನ್ನು ನೀಡಿದ್ದಾರೆ.
ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಪ್ರಾಥಮಿಕವಾಗಿ ಘಟನೆಗೆ ಸೂಕ್ತ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ, ಅಸಹಜ ಸಾವು ಎಂದು ಕೇವಲ ದಾಖಲೆ ಮುಗಿಸಲು ಯತ್ನಿಸಿದ್ದಾರನ್ನೂ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಇನ್ಸ್ಪೆಕ್ಟರ್ ವಿರುದ್ಧ ತ್ವರಿತ ಕ್ರಮಕ್ಕೆ ಶಿಫಾರಸು ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 23 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿರುವಂತೆ, ಮತ್ತಷ್ಟು ಬೆಳವಣಿಗೆಗಳ ನಿರೀಕ್ಷೆಯಿದೆ.
ಘಟನೆಯ ಹಿಂದಿನ ನಿಖರ ಕಾರಣ, ಘೋಷಣೆಗಳ ಭೂಮಿಕೆ ಮತ್ತು ಶಹೀನಬಾಗ್ ಪ್ರಭಾವದಂತ ಅಂಶಗಳ ಕುರಿತು ತನಿಖೆ ಆರಂಭವಾಗಿದೆ. ರಾಜ್ಯದ ಮಾನವ ಹಕ್ಕುಗಳ ಆಯೋಗವೂ ಈ ಪ್ರಕರಣವನ್ನು ಗಮನಕ್ಕೆ ತೆಗೆದುಕೊಂಡಿರುವ ಸಾಧ್ಯತೆ ಇದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…