ಮಾಲೂರು: ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದ ಸಮೀಪ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 700 ಗ್ರಾಂ ಗಾಂಜಾವನ್ನು ಮಾಲೂರು ಅಬಕಾರಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ತೆನೆ, ಹೂ ಮತ್ತು ಬೀಜ ಮಿಶ್ರಿತ ಒಣ ಗಾಂಜಾವನ್ನು ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ನೊಸಗೆರೆ ಗ್ರಾಮದ ಮೂರನೇ ಹಂತದಲ್ಲಿ ನಡೆದ ದಾಳಿಯಲ್ಲಿ, ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಒರಿಸ್ಸಾ ರಾಜ್ಯದ ಜಮಾದನ್ ಸಮಾಲ್ (38) ಮತ್ತು ಉತ್ತರ ಪ್ರದೇಶದ ವಿಶಾಲ್ ಚೌವ್ಹಾಣ್ (20) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ಬಳಸುತ್ತಿದ್ದ ದ್ವಿಚಕ್ರ ವಾಹನವನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಒಟ್ಟು ₹57,000 ಮೌಲ್ಯದ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅಬಕಾರಿ ನಿರೀಕ್ಷಕ ಜಿ. ಬಾಲಕೃಷ್ಣ ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕ ಶ್ರೀನಿವಾಸಮೂರ್ತಿ, ಕೋಲಾರದ ಉಪ ವಿಭಾಗದ ಅಧಿಕಾರಿ ಪಿ.ಕೆ. ಶಶಿಕಲಾ, ಮಾಲೂರು ವಲಯದ ಅಬಕಾರಿ ನಿರೀಕ್ಷಕ ಜಿ. ಬಾಲಕೃಷ್ಣ, ಉಪ ನಿರೀಕ್ಷಕ ವಿ. ಗಜೇಂದ್ರ ಕುಮಾರ್ ಹಾಗೂ ಮುಖ್ಯ ಪೇದೆಗಳಾದ ವೀರೇಶ್, ಗಿರಿಜಾಪತಿ, ರಜನಿಕಾಂತ್ ಭಾಗವಹಿಸಿದ್ದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…