Latest

ಶಿವಮೊಗ್ಗದಲ್ಲಿ ಗಾಂಜಾ ವಶ: ಇಬ್ಬರು ಆರೋಪಿಗಳು ಬಂಧನ, 5 ಕೆಜಿ ಗಾಂಜಾ ಜಪ್ತಿ

ಶಿವಮೊಗ್ಗ: ನಗರದ ಗಾಂಜಾ ವ್ಯಾಪಾರದ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ, ನಗರದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಸುಮಾರು ₹1.70 ಲಕ್ಷ ಮೌಲ್ಯದ ಗಾಂಜಾ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗದ ವಡ್ಡಿನಕೊಪ್ಪದ ರಂಗನಾಥ ಲೇಔಟ್‌ನಲ್ಲಿ ಇರುವ ಡಾಂಬರ್ ರಸ್ತೆಯ ಕೋಳಿಫಾರಂ ಶೆಡ್ ಹತ್ತಿರದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ, ಕ್ರೈಂ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ ಹಾಗೂ ಕಾರಿಯಪ್ಪ ಎ.ಜಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ರೂಪುಗೊಂಡಿತು.

ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ಕೃಷ್ಣಮೂರ್ತಿ ಕೆ. ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ ನೇತೃತ್ವದ ತಂಡದಲ್ಲಿ ಎಎಸ್‌ಐ ಶೇಖರ್, ಹೆಡ್ ಕಾನ್ಸ್ಟೇಬಲ್ ಧರ್ಮಾ ನಾಯ್ಕ, ಅವನಾಶ್, ಕಾನ್ಸ್ಟೆಬಲ್ ನಾರಾಯಣಸ್ವಾಮಿ, ಪಿರ್ದೋಸ್ ಅಹಮದ್, ರವಿ ಬಿ, ಆಂಡ್ರ್ಯೂಸ್ ಜೊನ್ಸ್, ಪ್ರಮೋದ್ ಎಲ್.ಬಿ ಮತ್ತು ಸಂಗಮೇಶ ಭಾಗವಹಿಸಿದ್ದರು.

ಬಂಧಿತರನ್ನು ಕಾರ್ತಿಕ್ ವಿಎಲ್ ಅಲಿಯಾಸ್ ಸಾಪಡ್ (21) ಮತ್ತು ಎನ್. ರಾಜೇಶ್ ಅಲಿಯಾಸ್ ರಾಜು (24) ಎಂದು ಗುರುತಿಸಲಾಗಿದ್ದು, ಇವರಿಂದ ಒಟ್ಟು 5.780 ಕಿಲೋಗ್ರಾಂ ಒಣ ಗಾಂಜಾ ಮತ್ತು ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

7 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

7 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

7 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

23 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

23 hours ago