Categories: CrimeLatest

‘ಪುಷ್ಪ’ ಸ್ಟೈಲ್‌ನಲ್ಲಿ ಗಾಂಜಾ ಸಾಗಣೆ!: ಕೋಳಿ ಆಹಾರದ ನಡುವೆ 250 ಕೆಜಿ ಗಾಂಜಾ ಪತ್ತೆ

ಬೆಂಗಳೂರು: ಪೌಲ್ಟ್ರಿ ಫೀಡ್ಸ್‌ (ಕೋಳಿಗಳಿಗೆ ಹಾಕುವ ಆಹಾರ) ಸಾಗಣೆ ನೆಪದಲ್ಲಿ ‘ಪುಷ್ಪ’ ಸಿನಿಮಾದ ಮಾದರಿಯಲ್ಲಿ ಅಂತರ್‌ರಾಜ್ಯ ಗಾಂಜಾ ಸಾಗಣೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಹೊರವಲಯದ ಜಿಗಣಿ ಪೊಲೀಸರು ಭೇದಿಸಿದ್ದು, ₹1.25 ಕೋಟಿ ಮೌಲ್ಯದ 250 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಒಡಿಶಾದಿಂದ ಲಾರಿಯಲ್ಲಿ ಪೌಲ್ಟ್ರಿ ಫೀಡ್ಸ್ ಲೋಡ್ ಮಧ್ಯೆ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಗಾಂಜಾ ಅಡಗಿಸಿ ಕರ್ನಾಟಕಕ್ಕೆ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ

ಖಚಿತ ಮಾಹಿತಿ ಆಧರಿಸಿ ಬೇಗೂರು ರಸ್ತೆಯ ಕೊಪ್ಪ ಬಳಿ ಜಿಗಣಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಲಾರಿಯನ್ನು ತಪಾಸಣೆ ನಡೆಸಿದಾಗ ಕೋಳಿ ಆಹಾರದ ಚೀಲಗಳ ನಡುವೆ ಅಡಗಿಸಲಾಗಿದ್ದ 250 ಕೆಜಿ ಗಾಂಜಾ ಪತ್ತೆಯಾಗಿದೆ.

ಪ್ರಕರಣ ಸಂಬಂಧ ಬಿಹಾರ ಮೂಲದ ರಾಮಾಯಣ್ ಯಾದವ್ ಮತ್ತು ಸಬೀರ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿಗಳಿಗಾಗಿ ಶೋಧ

ಈ ಗಾಂಜಾ ಜಾಲದ ಪ್ರಮುಖ ಆರೋಪಿಗಳಾದ ಬಿನೋದ್ ಸಿಂಗ್ ಹಾಗೂ ಬಾಬು ಎಂಬವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರನ್ನು ಶ್ಲಾಘಿಸಿ ನಗದು ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಸಾಗಣೆ ಜಾಲದ ಹಿಂದಿರುವ ಪ್ರಮುಖ ಕಿಂಗ್‌ಪಿನ್‌ಗಳನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago