Categories: Latest

ರಕ್ತಸಂಬಂಧ ಮೀರಿದ ಪ್ರೀತಿಗೆ ಮದುವೆ ಮುದ್ರೆ: ಅಕ್ಕ-ತಮ್ಮ ಹಸೆಮಣೆ ಏರಿದ ವಿಲಕ್ಷಣ ಘಟನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮಾಜವನ್ನು ಬೆಚ್ಚಿಬೀಳಿಸುವಂತಹ ವಿಲಕ್ಷಣ ಪ್ರೇಮ ವಿವಾಹವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಕ್ತಸಂಬಂಧದ ಮೇರೆಯನ್ನು ಮೀರಿ ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಇದೀಗ ಮದುವೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಮೂಲದ ಶಶಿಕಲಾ ಹಾಗೂ ಹೊಸಕೋಟೆಯ ಪ್ರವೀಣ್ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಈ ಹಿನ್ನೆಲೆ ಶಶಿಕಲಾ ಮತ್ತು ಪ್ರವೀಣ್ ವರಸೆಯಲ್ಲಿ ಅಕ್ಕ-ತಮ್ಮನ ಸಂಬಂಧಕ್ಕೆ ಸೇರಿದವರಾಗಿದ್ದಾರೆ. ಆದರೂ ಕುಟುಂಬದ ವಿರೋಧವನ್ನು ಲೆಕ್ಕಿಸದೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.

ಇದಕ್ಕೂ ಮುನ್ನ ಶಶಿಕಲಾಗೆ ಕುಟುಂಬಸ್ಥರು ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯಿಸಿ ಲಗ್ನಪತ್ರಿಕೆಯನ್ನೂ ಹಂಚಿದ್ದರು. ಮದುವೆ ನಡೆಯಲು ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ಶಶಿಕಲಾ ತನ್ನ ಪ್ರಿಯಕರ ಪ್ರವೀಣ್ ಜೊತೆ ಮನೆಯಿಂದ ತೆರಳಿದ್ದಾಳೆ. ಬಳಿಕ ಇಬ್ಬರೂ ಅಂಗಟ್ಟದ ಶಿವನ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ ತಮ್ಮ ಜೀವಕ್ಕೆ ಪೋಷಕರಿಂದ ಅಪಾಯವಿದೆ ಎಂದು ಆರೋಪಿಸಿರುವ ನವದಂಪತಿ, ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿ ಆವರಣದಲ್ಲಿ ಕುಟುಂಬಸ್ಥರು ಮತ್ತು ನವಜೋಡಿ ನಡುವೆ ಭಾವನಾತ್ಮಕ ಹೈಡ್ರಾಮಾ ನಡೆದಿದ್ದು, ಮಗಳ ನಡೆ ಕಂಡ ತಾಯಿ ಕಣ್ಣೀರಿಟ್ಟ ಘಟನೆ ಗಮನಸೆಳೆದಿತು.

“ಅಕ್ಕನ ಮಗಳಾಗಿ ತಮ್ಮನನ್ನೇ ಮದುವೆಯಾಗಿದ್ದೀಯಲ್ಲಾ, ಸಮಾಜ ಇದನ್ನು ಹೇಗೆ ಒಪ್ಪಿಕೊಳ್ಳುತ್ತದೆ?” ಎಂದು ತಾಯಿ ಆಕ್ರಂದನ ವ್ಯಕ್ತಪಡಿಸಿದರೂ, ಶಶಿಕಲಾ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. “ನನಗೆ ಪ್ರಿಯಕರನೇ ಸರ್ವಸ್ವ. ನಾನು ಮನೆಗೆ ಮರಳುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾಳೆ.

ಪ್ರಸ್ತುತ ಈ ಅಪರೂಪದ ಪ್ರೇಮ ವಿವಾಹ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago