Categories: Latest

ರಕ್ತಸಂಬಂಧ ಮೀರಿದ ಪ್ರೀತಿಗೆ ಮದುವೆ ಮುದ್ರೆ: ಅಕ್ಕ-ತಮ್ಮ ಹಸೆಮಣೆ ಏರಿದ ವಿಲಕ್ಷಣ ಘಟನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮಾಜವನ್ನು ಬೆಚ್ಚಿಬೀಳಿಸುವಂತಹ ವಿಲಕ್ಷಣ ಪ್ರೇಮ ವಿವಾಹವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಕ್ತಸಂಬಂಧದ ಮೇರೆಯನ್ನು ಮೀರಿ ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಇದೀಗ ಮದುವೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಮೂಲದ ಶಶಿಕಲಾ ಹಾಗೂ ಹೊಸಕೋಟೆಯ ಪ್ರವೀಣ್ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಈ ಹಿನ್ನೆಲೆ ಶಶಿಕಲಾ ಮತ್ತು ಪ್ರವೀಣ್ ವರಸೆಯಲ್ಲಿ ಅಕ್ಕ-ತಮ್ಮನ ಸಂಬಂಧಕ್ಕೆ ಸೇರಿದವರಾಗಿದ್ದಾರೆ. ಆದರೂ ಕುಟುಂಬದ ವಿರೋಧವನ್ನು ಲೆಕ್ಕಿಸದೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.

ಇದಕ್ಕೂ ಮುನ್ನ ಶಶಿಕಲಾಗೆ ಕುಟುಂಬಸ್ಥರು ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯಿಸಿ ಲಗ್ನಪತ್ರಿಕೆಯನ್ನೂ ಹಂಚಿದ್ದರು. ಮದುವೆ ನಡೆಯಲು ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ಶಶಿಕಲಾ ತನ್ನ ಪ್ರಿಯಕರ ಪ್ರವೀಣ್ ಜೊತೆ ಮನೆಯಿಂದ ತೆರಳಿದ್ದಾಳೆ. ಬಳಿಕ ಇಬ್ಬರೂ ಅಂಗಟ್ಟದ ಶಿವನ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ ತಮ್ಮ ಜೀವಕ್ಕೆ ಪೋಷಕರಿಂದ ಅಪಾಯವಿದೆ ಎಂದು ಆರೋಪಿಸಿರುವ ನವದಂಪತಿ, ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿ ಆವರಣದಲ್ಲಿ ಕುಟುಂಬಸ್ಥರು ಮತ್ತು ನವಜೋಡಿ ನಡುವೆ ಭಾವನಾತ್ಮಕ ಹೈಡ್ರಾಮಾ ನಡೆದಿದ್ದು, ಮಗಳ ನಡೆ ಕಂಡ ತಾಯಿ ಕಣ್ಣೀರಿಟ್ಟ ಘಟನೆ ಗಮನಸೆಳೆದಿತು.

“ಅಕ್ಕನ ಮಗಳಾಗಿ ತಮ್ಮನನ್ನೇ ಮದುವೆಯಾಗಿದ್ದೀಯಲ್ಲಾ, ಸಮಾಜ ಇದನ್ನು ಹೇಗೆ ಒಪ್ಪಿಕೊಳ್ಳುತ್ತದೆ?” ಎಂದು ತಾಯಿ ಆಕ್ರಂದನ ವ್ಯಕ್ತಪಡಿಸಿದರೂ, ಶಶಿಕಲಾ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. “ನನಗೆ ಪ್ರಿಯಕರನೇ ಸರ್ವಸ್ವ. ನಾನು ಮನೆಗೆ ಮರಳುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾಳೆ.

ಪ್ರಸ್ತುತ ಈ ಅಪರೂಪದ ಪ್ರೇಮ ವಿವಾಹ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago