ರಾಯಚೂರು ಜಿಲ್ಲೆಯ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಪತಿಯನ್ನು ನದಿಗೆ ತಳ್ಳಿದ ಪ್ರಕರಣವು ಇದೀಗ ಭಾರೀ ತಿರುವು ಪಡೆದುಕೊಂಡಿದೆ. ಆರೋಪಿಯಾಗಿರುವ ಪತ್ನಿ ಅಪ್ರಾಪ್ತೆಯಾಗಿರುವುದು ಹೊಸ ತನಿಖೆಯಿಂದ ಬಹಿರಂಗವಾಗಿದೆ.
ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ದಾಖಲೆಗಳ ಪ್ರಕಾರ, ತಾತಪ್ಪನ ಪತ್ನಿಯು ಕೇವಲ 15 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತ ಬಾಲಕಿ ಎಂಬುದು ದೃಢವಾಗಿದೆ. ಪರಿಣಾಮವಾಗಿ, ಈ ಪ್ರಕರಣವು ಕಾನೂನುಬಾಹಿರ ಬಾಲ್ಯ ವಿವಾಹವಾಗಿ ಪರಿಗಣಿಸಲಾಗಿದೆ.
ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಈ ಕುರಿತು ರಾಯಚೂರು ಜಿಲ್ಲೆಯ ಮಕ್ಕಳ ರಕ್ಷಣಾ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನು ಅನುಸರಿಸಿ ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದೇವಸೂಗೂರು ಗ್ರಾಮದಲ್ಲಿ ತಾತಪ್ಪನ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಸಿಡಿಪಿಓ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ತಾತಪ್ಪನ ಕುಟುಂಬದವರನ್ನು ಭೇಟಿಯಾಗಿ ವಿವಾಹ ಸಂಬಂಧಿತ ಮಾಹಿತಿ ಕೇಳಿದ್ದಾರೆ. ಆದಾಗ್ಯೂ, ತಾತಪ್ಪನ ಕುಟುಂಬದಿಂದ ಯಾವುದೇ ಬರವಣಿಗೆ ದಾಖಲೆಗಳು ಸಿಕ್ಕಿಲ್ಲ. ಕೇವಲ ಮೌಖಿಕ ಮಾಹಿತಿ ನೀಡಲಾಗಿದೆ. ಅರ್ಹ ದಾಖಲೆಗಳನ್ನು ಸಲ್ಲಿಸಲು ಕುಟುಂಬದವರು ಎರಡು ದಿನಗಳ ಕಾಲಾವಕಾಶವನ್ನು ಕೇಳಿದ್ದಾರೆ.
ತಾತಪ್ಪ ಹಾಗೂ ಮದುವೆ ಸಮಾರಂಭದಲ್ಲಿ ಪಾಲ್ಗೊಂಡವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ, ನದಿಗೆ ತಳ್ಳಿದ ಘಟನೆ, ಮತ್ತು ಈಗ ಬಾಲ್ಯ ವಿವಾಹದ ಹಿನ್ನಲೆಯಲ್ಲಿ, ಈ ಘಟನೆಯು ಮತ್ತಷ್ಟು ಗಂಭೀರ ರೂಪ ಪಡೆದಿದ್ದು, ಅಧಿಕಾರಿಗಳು ಮುಂದಿನ ಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…