ರಾಯಚೂರು ಜಿಲ್ಲೆಯ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಪತಿಯನ್ನು ನದಿಗೆ ತಳ್ಳಿದ ಪ್ರಕರಣವು ಇದೀಗ ಭಾರೀ ತಿರುವು ಪಡೆದುಕೊಂಡಿದೆ. ಆರೋಪಿಯಾಗಿರುವ ಪತ್ನಿ ಅಪ್ರಾಪ್ತೆಯಾಗಿರುವುದು ಹೊಸ ತನಿಖೆಯಿಂದ ಬಹಿರಂಗವಾಗಿದೆ.
ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ದಾಖಲೆಗಳ ಪ್ರಕಾರ, ತಾತಪ್ಪನ ಪತ್ನಿಯು ಕೇವಲ 15 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತ ಬಾಲಕಿ ಎಂಬುದು ದೃಢವಾಗಿದೆ. ಪರಿಣಾಮವಾಗಿ, ಈ ಪ್ರಕರಣವು ಕಾನೂನುಬಾಹಿರ ಬಾಲ್ಯ ವಿವಾಹವಾಗಿ ಪರಿಗಣಿಸಲಾಗಿದೆ.
ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಈ ಕುರಿತು ರಾಯಚೂರು ಜಿಲ್ಲೆಯ ಮಕ್ಕಳ ರಕ್ಷಣಾ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನು ಅನುಸರಿಸಿ ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದೇವಸೂಗೂರು ಗ್ರಾಮದಲ್ಲಿ ತಾತಪ್ಪನ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಸಿಡಿಪಿಓ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ತಾತಪ್ಪನ ಕುಟುಂಬದವರನ್ನು ಭೇಟಿಯಾಗಿ ವಿವಾಹ ಸಂಬಂಧಿತ ಮಾಹಿತಿ ಕೇಳಿದ್ದಾರೆ. ಆದಾಗ್ಯೂ, ತಾತಪ್ಪನ ಕುಟುಂಬದಿಂದ ಯಾವುದೇ ಬರವಣಿಗೆ ದಾಖಲೆಗಳು ಸಿಕ್ಕಿಲ್ಲ. ಕೇವಲ ಮೌಖಿಕ ಮಾಹಿತಿ ನೀಡಲಾಗಿದೆ. ಅರ್ಹ ದಾಖಲೆಗಳನ್ನು ಸಲ್ಲಿಸಲು ಕುಟುಂಬದವರು ಎರಡು ದಿನಗಳ ಕಾಲಾವಕಾಶವನ್ನು ಕೇಳಿದ್ದಾರೆ.
ತಾತಪ್ಪ ಹಾಗೂ ಮದುವೆ ಸಮಾರಂಭದಲ್ಲಿ ಪಾಲ್ಗೊಂಡವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ, ನದಿಗೆ ತಳ್ಳಿದ ಘಟನೆ, ಮತ್ತು ಈಗ ಬಾಲ್ಯ ವಿವಾಹದ ಹಿನ್ನಲೆಯಲ್ಲಿ, ಈ ಘಟನೆಯು ಮತ್ತಷ್ಟು ಗಂಭೀರ ರೂಪ ಪಡೆದಿದ್ದು, ಅಧಿಕಾರಿಗಳು ಮುಂದಿನ ಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ.
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…
ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…
ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…
ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…
ಮುಂಬೈ: ಮುಹರಂ ಮೆರವಣಿಗೆಯ ವೇಳೆ ಸಾರ್ವಜನಿಕರಿಗೆ ವಿಷಪ್ರಾಶನ ಮಾಡಿಸಲು ಸಂಚು ರೂಪಿಸಲಾಗಿದೆ ಎಂಬ ಶಂಕೆಯ ಮೇರೆಗೆ ಮುಂಬೈ ಪೊಲೀಸರು ಭಾರೀ…
ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ…