Categories: CrimeLatest

2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ

ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ ಭೀಕರ ತಿರುವು ಪಡೆದುಕೊಂಡಿದ್ದು, ಇದೀಗ ಆತನ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ಸಹೋದರನನ್ನು ಬಂಧಿಸಿದ್ದಾರೆ.

ಮುನ್ನಾಗೆ ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರು ಪತ್ನಿಯರಿದ್ದರು. ಇದಲ್ಲದೆ, ಸುಮನ್ ದೇವಿ ಎಂಬ ವಿವಾಹಿತ ಮಹಿಳೆಯೊಂದಿಗೆ ಆತ ಅಕ್ರಮ ಸಂಬಂಧ ಹೊಂದಿದ್ದ. ಕೆಲಸದ ನಿಮಿತ್ತ ಗಂಡ ಊರಿನಿಂದ ದೂರವಾಗಿದ್ದ ಸಮಯದಲ್ಲಿ, ಏಕಾಂಗಿಯಾಗಿದ್ದ ಸುಮನ್ ದೇವಿಗೆ ಮುನ್ನಾ ಸಹಾಯ ಮಾಡುತ್ತಿದ್ದ. ಇದೇ ವೇಳೆ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಆರಂಭದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಸಾಗುತ್ತಿದ್ದ ಈ ಸಂಬಂಧ, ನಂತರ ಮುನ್ನಾ ಪದೇಪದೇ ಭೇಟಿಯಾಗಲು ಒತ್ತಾಯಿಸುವುದು ಹಾಗೂ ಬ್ಲ್ಯಾಕ್‌ಮೇಲ್ ಮಾಡುವುದರಿಂದ ಗಲಾಟೆಗೆ ಕಾರಣವಾಯಿತು. ಕಿರುಕುಳದಿಂದ ಬೇಸತ್ತ ಸುಮನ್ ದೇವಿ ಈ ಸಂಬಂಧಕ್ಕೆ ಅಂತ್ಯ ಹಾಕಲು ನಿರ್ಧರಿಸಿದರು.

ಮಾರ್ಚ್ 18ರಂದು ತನ್ನ ತಾಯಿಯ ಮನೆಗೆ ಮುನ್ನಾನನ್ನು ಕರೆಸಿಕೊಂಡ ಸುಮನ್, ಸಹೋದರನ ಜೊತೆಗೂಡಿ ಸಂಚು ರೂಪಿಸಿದ್ದರು. ಮನೆಗೆ ಬಂದ ಮುನ್ನಾ ಮೇಲೆ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದರು.

ಹತ್ಯೆಯ ನಂತರ, ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕಾಲುವೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಮುನ್ನಾ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದರು.

ತನಿಖೆ ವೇಳೆ ಮುನ್ನಾನ ಮೋಟಾರ್‌ಸೈಕಲ್ ನಿರ್ಜನ ಪ್ರದೇಶದಲ್ಲಿ ಪತ್ತೆಯಾಯಿತು. ನಂತರ ಫೋನ್ ಕಾಲ್‌ ರೆಕಾರ್ಡ್ ಪರಿಶೀಲಿಸಿದಾಗ ಸುಮನ್ ದೇವಿಯೊಂದಿಗೆ ಅವನ ಸಂಪರ್ಕ ಬಹಿರಂಗವಾಯಿತು. ಪೊಲೀಸರು ವಿಚಾರಣೆ ನಡೆಸಿದಾಗ ಸುಮನ್ ದೇವಿ ಅಪರಾಧ ಒಪ್ಪಿಕೊಂಡಳು.

ಮಾರ್ಚ್ 22ರಂದು ಕಾಲುವೆಯಿಂದ ಮುನ್ನಾನ ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು, ಸುಮನ್ ದೇವಿ ಮತ್ತು ಆಕೆಯ ಸಹೋದರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಮುನ್ನಾ ಮುಂಬರುವ ಗ್ರಾಮ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದ ಸಮಯದಲ್ಲೇ ಈ ಘಟನೆ ಸಂಭವಿಸಿದೆ. ಆತನಿಗೆ ಇಬ್ಬರು ಪತ್ನಿಯರು ಮತ್ತು ಒಟ್ಟು 18 ಮಕ್ಕಳು ಇದ್ದು, ಅವರನ್ನೆಲ್ಲ ಬಿಟ್ಟು ದುರ್ಘಟನೆಯಿಂದ ಸಾವನ್ನಪ್ಪಿರುವುದು ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

11 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

18 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

18 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago