Latest

ಮ್ಯಾಟ್ರಿಮೋನಿಯಲ್ಲಿ ಸಿಕ್ಕ ಮಹಿಳೆಯನ್ನು ಮದುವೆಯಾದ; ಮೋಸ್ಟ್ ವಾಂಟೆಡ್ ಕ್ರಿಮಿನಲ್ ಎಂದು ತಿಳಿದ ಮೇಲೆ ದಂಗಾದ!

ಗುಜರಾತ್‌ನ ಪೋರಬಂದರ್‌ನ ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿಯಲ್​ ವೆಬ್​ಸೈಟ್​ನಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಅವರು ಮದುವೆಯೂ ಆಗಿದ್ದರು. ಮದುವೆಯಾದ ಕೇವಲ ಆರು ತಿಂಗಳೊಳಗೆ, ಅವನಿಗೆ ತನ್ನ ಹೆಂಡತಿ ಮೋಸ್ಟ್ ವಾಂಟೆಡ್​ ಕ್ರಿಮಿನಲ್​ ಎನ್ನುವ ಕರಾಳ ಸತ್ಯ ತಿಳಿದು ಬಂದಿದೆ.
ಹೊರಗೆ ಹೋದ ರೀಟಾ ಅನೇಕ ದಿನಗಳು ಕಳೆದರೂ ಹಿಂತಿರುಗಲಿಲ್ಲ. ಬದಲಾಗಿ ವಿಮಲ್​ಗೆ ರೀಟಾಳ ವಕೀಲರಿಂದ ಕರೆ ಬಂದಿದೆ. ರೀಟಾ ವಿರುದ್ಧ ಪ್ರಕರಣ ದಾಖಲಾಗಿದ್ದು, 1 ಲಕ್ಷ ರೂಪಾಯಿ ಜಾಮೀನು ಹಣದಲ್ಲಿ ಆಕೆಗೆ ಸಹಾಯ ಮಾಡಬೇಕು ಎಂದು ವಕೀಲರು ತಿಳಿಸಿದರು. ಪ್ರಕರಣ ಗಂಭೀರವಾಗಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಸರಿ ಎಂದುಕೊಂಡ ವಿಮಲ್, ರೀಟಾ ಅವರ ನ್ಯಾಯಾಲಯದ ಪತ್ರಗಳನ್ನು ನೋಡಿದಾಗ ಅವರ ಮದುವೆ ಸುಳ್ಳಿನ ಮೇಲೆ ನಿರ್ಮಿಸಲ್ಪಟ್ಟಿದೆ ಎಂದು ಕಂಡುಕೊಂಡರು. ಮೊದಲನೆಯದಾಗಿ, ಆಕೆಯ ಹೆಸರು ರೀಟಾ ದಾಸ್ ಅಲ್ಲ ಎನ್ನುವುದು ಅವರ ಗಮನಕ್ಕೆ ಬಂದಿದ್ದು ಆಕೆಯ ಅಸಲಿ ಹೆಸರು ರೀಟಾ ಚೌಹಾಣ್. ವಿಮಲ್ ತನ್ನ ಹೆಂಡತಿಯೊಂದಿಗೆ ಹೆಸರಿನ ಗೊಂದಲವನ್ನು ಸ್ಪಷ್ಟಪಡಿಸಲು ನಿರ್ಧರಿಸಿದ್ದ. ಆಗ ರೀಟಾ ಆತನ ಕರೆಗಳಿಗೆ ಉತ್ತರಿಸುವುದನ್ನು ನಿಲ್ಲಿಸಿ ಅವನನ್ನು ಬ್ಲಾಕ್​ ಮಾಡಿದ್ದಾಳೆ. ಆತನ ಪ್ರಶ್ನೆಗಳಿಗೆ ಅವಳಲ್ಲಿ ಯಾವುದೇ ಉತ್ತರಗಳು ಇರಲಿಲ್ಲ.
ಅಸಮಾಧಾನಗೊಂಡ ವ್ಯಕ್ತಿ ಗೂಗಲ್ ಅನ್ನು ಅವಲಂಬಿಸಲು ನಿರ್ಧರಿಸಿದಾಗ ಕೆಲವೇ ಸೆಕೆಂಡುಗಳಲ್ಲಿ ತನ್ನ ಹೆಂಡತಿ ವಂಚನೆ, ಕಳ್ಳತನ, ಕೊಲೆ ಮತ್ತು ಬೇಟೆಯ ಆರೋಪಗಳನ್ನು ಹೊಂದಿರುವ ಅಪರಾಧಿ ಎಂದು ಅವನು ಅರಿತುಕೊಂಡಿದ್ದಾನೆ. ಇಷ್ಟೇ ಅಲ್ಲದೇ, ಈ ಖತರ್ನಾಕ್​ ರೀಟಾ ಈ ಹಿಂದೆ ಅನಿಲ್ ಚೌಹಾಣ್ ಎಂಬ ಸರಣಿ ಕಾರು ಕಳ್ಳನನ್ನು ಮದುವೆಯಾಗಿದ್ದಳು. ಸದ್ಯ ಜೈಲಿನಲ್ಲಿರುವ ಅನಿಲ್​ನೊಂದಿಗೆ ತನಗೆ ಯಾವುದೇ ಸಂಪರ್ಕವಿಲ್ಲ ಎಂದು ರೀಟಾ ತಿಳಿಸಿದ್ದಾಳೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

7 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

7 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

7 hours ago