Latest

ಮದುವೆಯಾಗು ಎಂದ ವಿವಾಹಿತ ಗೆಳತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಕ್ರೂರಿ!

ಈಗಾಗಲೇ ಮದುವೆಯಾಗಿದ್ದ ತನ್ನ ಗೆಳತಿಯನ್ನು ಕೊಲೆಮಾಡಿ, ಆಕೆಯ ದೇಹವನ್ನು ಭಾಗಗಳಾಗಿ ಕತ್ತರಿಸಿ ರಾಜಸ್ಥಾನದ ನಾಗೌರ್‌ನಲ್ಲಿ ಹಲವಾರು ಸ್ಥಳಗಳಲ್ಲಿ ಎಸೆದಿದ್ದಾನೆ. ಈ ಪ್ರಕರಣವು ದೆಹಲಿಯ ಭೀಕರವಾದ ಶ್ರದ್ಧಾ ವಾಕರ್ ಹತ್ಯೆಯನ್ನು ನೆನಪಿಸುವಂಥದ್ದಾಗಿದೆ. ಆಕೆ ಬಾಲಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಾಸರ್ ಗ್ರಾಮದ ವಿವಾಹಿತ ಮಹಿಳೆ. ಜನವರಿ 20 ರಂದು ಮುಂಡಾಸರ್‌ನಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗುವುದಾಗಿ ಹೇಳಿ ಮಹಿಳೆ ತನ್ನ ತಾಯಿಯ ಮನೆಯನ್ನು ಬಿಟ್ಟು ಬಂದಿದ್ದಳು. ಆದರೆ, ಗಂಟೆಗಳ ನಂತರ ಆಕೆಯನ್ನು ಸಂಪರ್ಕಿಸಿದಾಗ ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು.

ಎರಡು ದಿನಗಳ ನಂತರ ಸಂತ್ರಸ್ತೆಯ ಸಂಬಂಧಿಕರು ಪೊಲೀಸರನ್ನು ಸಂಪರ್ಕಿಸಿದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದಂತೆ ಜನವರಿ 28 ರಂದು ನಾಗೌರ್ ನಗರದ ಮಾಲ್ವಾ ರಸ್ತೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಿಂಭಾಗದ ಪೊದೆಗಳಲ್ಲಿ ಮಹಿಳೆಯ ಬಟ್ಟೆ, ಕೂದಲು, ದವಡೆ ಪತ್ತೆಯಾಗಿದೆ. ಸಂತ್ರಸ್ತೆಯ ಉಡುಪುಗಳಲ್ಲಿ ರಕ್ತದ ಕಲೆಗಳಿರುವುದು ದೃಢಪಟ್ಟ ಬಳಿಕ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ಆಕೆಯ ಪ್ರಿಯಕರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ, ಮಹಿಳೆ ತನ್ನನ್ನು ಮದುವೆಯಾಗುವಂತೆ ದಿನದಿಂದ ದಿನಕ್ಕೆ ಒತ್ತಡ ಹಾಕುತ್ತಿದ್ದಳು. ಆದ್ದರಿಂದ ಕೊಲೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.  ಆರೋಪಿ ಕೊಲೆಯಾದ ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ದೇವ್ರ ಗ್ರಾಮದ ಬಾವಿಯಲ್ಲಿ ದೇಹದ ಭಾಗಗಳನ್ನು ಎಸೆದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಕೊಲೆಯಾದ ಮಹಿಳೆಯ ದೇಹದ ಭಾಗಗಳನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗಿದೆ. ದಿನಗಟ್ಟಲೆ ಹುಡುಕಾಟ ನಡೆಸಿದ ಪೊಲೀಸರು ಶವವನ್ನು ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ನಂತರ ಆರೋಪಿಗಳು ಪೊಲೀಸರನ್ನು ದಾರಿತಪ್ಪಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಯ ಪಾಲಿಗ್ರಾಫ್ ಪರೀಕ್ಷೆಯನ್ನು ಜೈಪುರದಲ್ಲಿ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

2 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

2 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

16 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

16 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

16 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

16 hours ago