ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ನಡೆದ ಬಳಿಕ ಶವವನ್ನು ಮನೆಯೊಳಗೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಇಳಕಲ್ ಮೂಲದ ಅಕ್ಷತಾ (30) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ನಾನಾ ಸಾಹೇಬ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಜಿಗಣಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಜೂನ್ 20ರಂದು ಪಟಾಲಮ್ಮ ಬಡಾವಣೆಯ ಬಾಡಿಗೆ ಮನೆಯೊಂದರಿಂದ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮನೆ ಮಾಲೀಕರು ಕಿಟಕಿಯಿಂದ ಒಳಗೆ ನೋಡಿದಾಗ ಅಕ್ಷತಾ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆರಂಭದಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಿಸಲಾಗಿತ್ತು.
ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅಕ್ಷತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಇದರಿಂದ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಪತಿ-ಮಕ್ಕಳನ್ನು ತೊರೆದು ಪ್ರಿಯಕರನ ಜೊತೆ ಜೀವನ
ಅಕ್ಷತಾ ಅವರು 2014ರಲ್ಲಿ ಕೃಷ್ಣ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗು ಇದೆ. ಕೃಷ್ಣ ಮರದ ಕೆಲಸ ಮಾಡುತ್ತಿದ್ದರೆ, ಅಕ್ಷತಾ ಸೀರೆ ನೇಯ್ಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾನಾ ಸಾಹೇಬ್ನೊಂದಿಗೆ ಅಕ್ಷತಾಗೆ ಪರಿಚಯವಾಗಿ, ಬಳಿಕ ಅದು ಪ್ರೇಮಸಂಬಂಧಕ್ಕೆ ತಿರುಗಿತ್ತು. ನಂತರ ಅಕ್ಷತಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ನಾನಾ ಸಾಹೇಬ್ ಜೊತೆ ಜಿಗಣಿಗೆ ಬಂದಿದ್ದಳು ಎನ್ನಲಾಗಿದೆ.
ಗಂಡ-ಹೆಂಡತಿ ಎಂದು ಹೇಳಿ ಬಾಡಿಗೆ ಮನೆ
ಕಳೆದ ನವೆಂಬರ್ನಲ್ಲಿ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ಅಕ್ಷತಾ ಮತ್ತು ನಾನಾ ಸಾಹೇಬ್ ತಾವಿಬ್ಬರು ಗಂಡ-ಹೆಂಡತಿ ಎಂದು ಪರಿಚಯಿಸಿಕೊಂಡು ಬಾಡಿಗೆ ಮನೆ ಪಡೆದಿದ್ದರು. ಅಲ್ಲಿಯೇ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಈ ಗಲಾಟೆಯ ಹಿನ್ನೆಲೆ ನಾನಾ ಸಾಹೇಬ್ ಅಕ್ಷತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಜಿಗಣಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ.
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…
ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…
ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದ ಹೋಟೆಲ್ವೊಂದರಲ್ಲಿ ನಡೆದ ಅಸಹ್ಯಕರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು…