World

ರಷ್ಯಾದ ಮೇಲೆ ಉಕ್ರೇನ್‌ ರಣಕಹಳೆ: ಮಾಸ್ಕೋ ಸೇರಿದಂತೆ 10 ಪ್ರದೇಶಗಳ ಮೇಲೆ ಭಾರೀ ಡ್ರೋನ್ ದಾಳಿ

ರಷ್ಯಾ-ಉಕ್ರೇನ್‌ ಯುದ್ಧ ತೀವ್ರಗೊಳ್ಳುತ್ತಲೇ ಇದ್ದು, ಉಕ್ರೇನ್‌ ರಷ್ಯಾದ ರಾಜಧಾನಿ ಮಾಸ್ಕೋವಿನ ವಿರುದ್ಧ ಭಾರೀ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಷ್ಯಾದ 10ಕ್ಕೂ ಹೆಚ್ಚು ಪ್ರದೇಶಗಳ ಮೇಲೆ ಉಕ್ರೇನ್‌ ಡ್ರೋನ್‌ಗಳ ಸುರಿಮಳೆಯನ್ನೇ ಸುರಿಸಿದೆ.

ಈ ದಾಳಿಯು ಉಕ್ರೇನ್‌ ಕಳೆದ ಮೂರು ವರ್ಷಗಳಲ್ಲಿ ರಷ್ಯಾ ವಿರುದ್ಧ ನಡೆಸಿದ ಅತ್ಯಂತ ದೊಡ್ಡ ಡ್ರೋನ್ ದಾಳಿ ಎಂದು ಹೇಳಲಾಗುತ್ತಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು ಈ ದಾಳಿಗೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಅರ್ಧರಾತ್ರಿ ವೇಳೆಗೆ ಬರೋಬ್ಬರಿ 337 ಉಕ್ರೇನ್‌ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ಸೇನೆ ಹೇಳಿದೆ.

ಅಮೆರಿಕ-ಉಕ್ರೇನ್ ಚರ್ಚೆಯ ಮುಂಚಿನ ದಾಳಿ

ಈ ದಾಳಿ ಅಮೆರಿಕ-ಉಕ್ರೇನ್‌ ನಡುವಿನ ಮಹತ್ವದ ಸಭೆಯ ಕೆಲವೇ ಗಂಟೆಗಳ ಮುಂಚೆ ನಡೆದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಉಕ್ರೇನ್‌ ನಿಯೋಗ ಮಂಗಳವಾರ (ಮಾರ್ಚ್ 11) ಸೌದಿ ಅರೇಬಿಯಾದಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕರನ್ನು ಭೇಟಿಯಾಗಲಿದ್ದು, ಈ ಸಂದರ್ಶನ ಯುದ್ಧ ಮುಗಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಆದರೆ ಈಗ ನಡೆದ ಭಾರೀ ದಾಳಿಯಿಂದ ಉಕ್ರೇನ್‌ಗೆ ಯುದ್ಧ ಮುಗಿಸುವ ಮನಸ್ಸು ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಅಮೆರಿಕ-ಉಕ್ರೇನ್‌ ಸಂಬಂಧದಲ್ಲಿ ಬಿರುಕು?

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಇತ್ತೀಚೆಗೆ ಅಮೆರಿಕದ ಶ್ವೇತ ಭವನಕ್ಕೆ ಭೇಟಿ ನೀಡಿದ್ದರು, ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೊಂದಿಗೆ ಅವರ ಮಾತುಕತೆ ಅಷ್ಟು ಅನುಕೂಲಕರವಾಗಿರಲಿಲ್ಲ. ಅಷ್ಟೇ ಅಲ್ಲದೆ, ಉಕ್ರೇನ್‌ನ ಖನಿಜ ಸಂಪತ್ತುಳ್ಳ ಪ್ರದೇಶಗಳನ್ನು ಬಿಟ್ಟುಕೊಡಲು ಅಮೆರಿಕ ಒತ್ತಾಯಿಸಿದ್ದರಿಂದ ಉಕ್ರೇನ್‌ ಬೇಸರಗೊಂಡಿತ್ತು.

ಈ ಹಿನ್ನೆಲೆಯಲ್ಲಿ, ಉಕ್ರೇನ್‌ ರಷ್ಯಾ ವಿರುದ್ಧ ಏಕಾಏಕಿ ಹೂಡಿದ ಭಾರೀ ದಾಳಿಯು ಅಮೆರಿಕದ ಮೇಲೆ ಉಕ್ರೇನ್‌ ಮೂಡಿದ ಅಸಮಾಧಾನದ ಪ್ರತೀಕವೇ? ಎಂಬ ಪ್ರಶ್ನೆಗಳು ಎದ್ದಿರುವುದು ಗಮನಾರ್ಹ. ದಾಳಿಯ ಕುರಿತು ಉಕ್ರೇನ್‌ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago