World

ರಷ್ಯಾದ ಮೇಲೆ ಉಕ್ರೇನ್‌ ರಣಕಹಳೆ: ಮಾಸ್ಕೋ ಸೇರಿದಂತೆ 10 ಪ್ರದೇಶಗಳ ಮೇಲೆ ಭಾರೀ ಡ್ರೋನ್ ದಾಳಿ

ರಷ್ಯಾ-ಉಕ್ರೇನ್‌ ಯುದ್ಧ ತೀವ್ರಗೊಳ್ಳುತ್ತಲೇ ಇದ್ದು, ಉಕ್ರೇನ್‌ ರಷ್ಯಾದ ರಾಜಧಾನಿ ಮಾಸ್ಕೋವಿನ ವಿರುದ್ಧ ಭಾರೀ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಷ್ಯಾದ 10ಕ್ಕೂ ಹೆಚ್ಚು ಪ್ರದೇಶಗಳ ಮೇಲೆ ಉಕ್ರೇನ್‌ ಡ್ರೋನ್‌ಗಳ ಸುರಿಮಳೆಯನ್ನೇ ಸುರಿಸಿದೆ.

ಈ ದಾಳಿಯು ಉಕ್ರೇನ್‌ ಕಳೆದ ಮೂರು ವರ್ಷಗಳಲ್ಲಿ ರಷ್ಯಾ ವಿರುದ್ಧ ನಡೆಸಿದ ಅತ್ಯಂತ ದೊಡ್ಡ ಡ್ರೋನ್ ದಾಳಿ ಎಂದು ಹೇಳಲಾಗುತ್ತಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು ಈ ದಾಳಿಗೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಅರ್ಧರಾತ್ರಿ ವೇಳೆಗೆ ಬರೋಬ್ಬರಿ 337 ಉಕ್ರೇನ್‌ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ಸೇನೆ ಹೇಳಿದೆ.

ಅಮೆರಿಕ-ಉಕ್ರೇನ್ ಚರ್ಚೆಯ ಮುಂಚಿನ ದಾಳಿ

ಈ ದಾಳಿ ಅಮೆರಿಕ-ಉಕ್ರೇನ್‌ ನಡುವಿನ ಮಹತ್ವದ ಸಭೆಯ ಕೆಲವೇ ಗಂಟೆಗಳ ಮುಂಚೆ ನಡೆದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಉಕ್ರೇನ್‌ ನಿಯೋಗ ಮಂಗಳವಾರ (ಮಾರ್ಚ್ 11) ಸೌದಿ ಅರೇಬಿಯಾದಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕರನ್ನು ಭೇಟಿಯಾಗಲಿದ್ದು, ಈ ಸಂದರ್ಶನ ಯುದ್ಧ ಮುಗಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಆದರೆ ಈಗ ನಡೆದ ಭಾರೀ ದಾಳಿಯಿಂದ ಉಕ್ರೇನ್‌ಗೆ ಯುದ್ಧ ಮುಗಿಸುವ ಮನಸ್ಸು ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಅಮೆರಿಕ-ಉಕ್ರೇನ್‌ ಸಂಬಂಧದಲ್ಲಿ ಬಿರುಕು?

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಇತ್ತೀಚೆಗೆ ಅಮೆರಿಕದ ಶ್ವೇತ ಭವನಕ್ಕೆ ಭೇಟಿ ನೀಡಿದ್ದರು, ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೊಂದಿಗೆ ಅವರ ಮಾತುಕತೆ ಅಷ್ಟು ಅನುಕೂಲಕರವಾಗಿರಲಿಲ್ಲ. ಅಷ್ಟೇ ಅಲ್ಲದೆ, ಉಕ್ರೇನ್‌ನ ಖನಿಜ ಸಂಪತ್ತುಳ್ಳ ಪ್ರದೇಶಗಳನ್ನು ಬಿಟ್ಟುಕೊಡಲು ಅಮೆರಿಕ ಒತ್ತಾಯಿಸಿದ್ದರಿಂದ ಉಕ್ರೇನ್‌ ಬೇಸರಗೊಂಡಿತ್ತು.

ಈ ಹಿನ್ನೆಲೆಯಲ್ಲಿ, ಉಕ್ರೇನ್‌ ರಷ್ಯಾ ವಿರುದ್ಧ ಏಕಾಏಕಿ ಹೂಡಿದ ಭಾರೀ ದಾಳಿಯು ಅಮೆರಿಕದ ಮೇಲೆ ಉಕ್ರೇನ್‌ ಮೂಡಿದ ಅಸಮಾಧಾನದ ಪ್ರತೀಕವೇ? ಎಂಬ ಪ್ರಶ್ನೆಗಳು ಎದ್ದಿರುವುದು ಗಮನಾರ್ಹ. ದಾಳಿಯ ಕುರಿತು ಉಕ್ರೇನ್‌ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಭ್ರಷ್ಟರ ಬೇಟೆ

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

12 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

12 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

23 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

23 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

23 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

23 hours ago