Latest

ಮೈಸೂರಿನಲ್ಲಿ ಭಾರೀ ಡ್ರಗ್ಸ್ ದಂಧೆ ಬಯಲು:ನಗರದ ಹೊರವಲಯದಲ್ಲಿ ಎಂಡಿಎಂಎ ತಯಾರಿಕಾ ಘಟಕ ಪತ್ತೆ

ಮೈಸೂರು, ಜುಲೈ 27: ಸಾಂಸ್ಕೃತಿಕ ರಾಜಧಾನಿಯಾಗಿ ಹೆಸರುವಾಸಿಯಾದ ಮೈಸೂರು ಇದೀಗ ಮಾದಕ ವಸ್ತು ದಂಧೆಯಿಂದ ಕಲೆಂಕಿತವಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರು ಹೊರವಲಯದಲ್ಲಿ ನಡೆಸಿದ ಸರ್ಪಗಾಳದ ದಾಳಿಯಲ್ಲಿ ಲಕ್ಷಾಂತರ ರೂಪಾಯಿಗಳ ಮೌಲ್ಯದ ಎಂಡಿಎಂಎ (ಮೆಥಿಲೆನೆ ಡಯಾಕ್ಸಿ ಮೆಥಾಂಫೆಟಮಿನ್) ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಈ ಘಟಕ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಚಾರ ಇಂದು ಬಹಿರಂಗವಾಗಿದೆ.

ಮಹಾರಾಷ್ಟ್ರದಲ್ಲಿ ಬಂಧಿತನಾಗಿದ್ದ ಡ್ರಗ್ ಪೆಡ್ಲರ್ ಒಬ್ಬನು ವಿಚಾರಣೆಯ ವೇಳೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕವಿದೆ ಎಂಬ ಮಾಹಿತಿಯನ್ನು ಒದಗಿಸಿದ್ದ. ಈ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ವಿಶೇಷ ಪೊಲೀಸ ಪಡೆ ಮೈಸೂರಿನ ರಿಂಗ್‌ರೋಡ್ ಬಳಿ ಗ್ಯಾರೇಜ್ ನಲ್ಲಿ ನಡೆಯುತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತು.

ದಾಳಿಯ ವೇಳೆ ಕೋಟ್ಯಾಂತರ ಮೌಲ್ಯದ ಎಂಡಿಎಂಎ ಸೆರೆಯಾಗಿದೆ. ಅಂತರ್ಜಾತಿ ಮಾದಕ ವಸ್ತು ಮಾರುಕಟ್ಟೆಯಲ್ಲಿ ಇದೊಂದು ಕೆಜಿಗೆ ₹2 ಕೋಟಿಯಷ್ಟು ಬೆಲೆ ಬಾಳುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟಕದಿಂದ ದೇಶದ ಹಲವು ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಿಗೂ ಮಾದಕ ವಸ್ತುಗಳನ್ನು ಪೂರೈಸಲಾಗುತ್ತಿತ್ತು ಎಂಬ ಅಂಶ ಸದ್ಯಕ್ಕೆ ಬೆಳಕಿಗೆ ಬಂದಿದೆ.

ಮೈಸೂರಿನಂತಹ ಶಾಂತ ಪ್ರದೇಶದಲ್ಲಿ ಇಂತಹ ತಯಾರಿಕಾ ಘಟಕ ಅಡಗಿಸಿಡಲಾಗಿದ್ದೇ ಪೊಲೀಸರಿಗೂ ಅಚ್ಚರಿ ಮೂಡಿಸಿದೆ. ಗ್ಯಾರೇಜ್ ಎನ್ನುವ ಹೆಸರಿನಲ್ಲಿ ಈ ಮಾದಕ ದಂಧೆ ಕಾರ್ಯ ನಿರ್ವಹಿಸುತ್ತಿದ್ದಂತೆಯೇ ಪ್ರಕರಣದಿಂದ ಬಹಿರಂಗವಾಗಿದೆ.

ಈ ಕುರಿತು ಹೆಚ್ಚಿನ ತನಿಖೆ ಆರಂಭವಾಗಿದ್ದು, ಘಟಕದ ಹಿಂದಿರುವ ಪ್ರಮುಖ ಮಾಸ್ಟರ್‌ಮೈಂಡ್‌ಗಳ ಪತ್ತೆಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಯಿಂದ ಮೈಸೂರಿನ ಇಮೇಜ್‌ಗೆ ಧಕ್ಕೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

37 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago