ಮೈಸೂರು, ಜುಲೈ 27: ಸಾಂಸ್ಕೃತಿಕ ರಾಜಧಾನಿಯಾಗಿ ಹೆಸರುವಾಸಿಯಾದ ಮೈಸೂರು ಇದೀಗ ಮಾದಕ ವಸ್ತು ದಂಧೆಯಿಂದ ಕಲೆಂಕಿತವಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರು ಹೊರವಲಯದಲ್ಲಿ ನಡೆಸಿದ ಸರ್ಪಗಾಳದ ದಾಳಿಯಲ್ಲಿ ಲಕ್ಷಾಂತರ ರೂಪಾಯಿಗಳ ಮೌಲ್ಯದ ಎಂಡಿಎಂಎ (ಮೆಥಿಲೆನೆ ಡಯಾಕ್ಸಿ ಮೆಥಾಂಫೆಟಮಿನ್) ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಈ ಘಟಕ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಚಾರ ಇಂದು ಬಹಿರಂಗವಾಗಿದೆ.
ಮಹಾರಾಷ್ಟ್ರದಲ್ಲಿ ಬಂಧಿತನಾಗಿದ್ದ ಡ್ರಗ್ ಪೆಡ್ಲರ್ ಒಬ್ಬನು ವಿಚಾರಣೆಯ ವೇಳೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕವಿದೆ ಎಂಬ ಮಾಹಿತಿಯನ್ನು ಒದಗಿಸಿದ್ದ. ಈ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ವಿಶೇಷ ಪೊಲೀಸ ಪಡೆ ಮೈಸೂರಿನ ರಿಂಗ್ರೋಡ್ ಬಳಿ ಗ್ಯಾರೇಜ್ ನಲ್ಲಿ ನಡೆಯುತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತು.
ದಾಳಿಯ ವೇಳೆ ಕೋಟ್ಯಾಂತರ ಮೌಲ್ಯದ ಎಂಡಿಎಂಎ ಸೆರೆಯಾಗಿದೆ. ಅಂತರ್ಜಾತಿ ಮಾದಕ ವಸ್ತು ಮಾರುಕಟ್ಟೆಯಲ್ಲಿ ಇದೊಂದು ಕೆಜಿಗೆ ₹2 ಕೋಟಿಯಷ್ಟು ಬೆಲೆ ಬಾಳುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟಕದಿಂದ ದೇಶದ ಹಲವು ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಿಗೂ ಮಾದಕ ವಸ್ತುಗಳನ್ನು ಪೂರೈಸಲಾಗುತ್ತಿತ್ತು ಎಂಬ ಅಂಶ ಸದ್ಯಕ್ಕೆ ಬೆಳಕಿಗೆ ಬಂದಿದೆ.
ಮೈಸೂರಿನಂತಹ ಶಾಂತ ಪ್ರದೇಶದಲ್ಲಿ ಇಂತಹ ತಯಾರಿಕಾ ಘಟಕ ಅಡಗಿಸಿಡಲಾಗಿದ್ದೇ ಪೊಲೀಸರಿಗೂ ಅಚ್ಚರಿ ಮೂಡಿಸಿದೆ. ಗ್ಯಾರೇಜ್ ಎನ್ನುವ ಹೆಸರಿನಲ್ಲಿ ಈ ಮಾದಕ ದಂಧೆ ಕಾರ್ಯ ನಿರ್ವಹಿಸುತ್ತಿದ್ದಂತೆಯೇ ಪ್ರಕರಣದಿಂದ ಬಹಿರಂಗವಾಗಿದೆ.
ಈ ಕುರಿತು ಹೆಚ್ಚಿನ ತನಿಖೆ ಆರಂಭವಾಗಿದ್ದು, ಘಟಕದ ಹಿಂದಿರುವ ಪ್ರಮುಖ ಮಾಸ್ಟರ್ಮೈಂಡ್ಗಳ ಪತ್ತೆಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಯಿಂದ ಮೈಸೂರಿನ ಇಮೇಜ್ಗೆ ಧಕ್ಕೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…