Latest

ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: ಅತಿದೊಡ್ಡ ಡ್ರಗ್ಸ್ ಜಾಲ ಭೇದಿ, ಆಫ್ರಿಕಾ ಮೂಲದ ಇಬ್ಬರು ಮಹಿಳೆಯರ ಬಂಧನ

ಮಂಗಳೂರು ಸಿಸಿಬಿ ಪೊಲೀಸರು ಇತಿಹಾಸದಲ್ಲಿ ದಾಖಲಾಗುವಂತಾದ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ, ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 37.878 ಕೆಜಿ ಎಂಡಿಎಂಎ, ನಾಲ್ಕು ಮೊಬೈಲ್‌ ಫೋನ್, ಎರಡು ಪಾಸ್‌ಪೋರ್ಟ್‌, ಟ್ರಾಲಿ ಬ್ಯಾಗ್ ಮತ್ತು ₹18,460 ನಗದು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಮೂಲಕ ಡ್ರಗ್ಸ್ ಸಾಗಾಣಿಕೆ: ಇಬ್ಬರು ಮಹಿಳೆಯರ ಬಂಧನ
ಬಂಧಿತರಾದವರು ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ (31) ಮತ್ತು ಅಬಿಗೈಲ್ ಅಡೋನಿಸ್ (30) ಎಂಬ ಮಹಿಳೆಯರು. ಇವರು ದೆಹಲಿಯಿಂದ ವಿಮಾನ ಮೂಲಕ ಬೆಂಗಳೂರಿಗೆ ಆಗಮಿಸಿ, ಬಳಿಕ ಎಲೆಕ್ಟ್ರಾನಿಕ್ ಸಿಟಿಗೆ ಬಂದಿದ್ದರು. ಪೊಲೀಸರ ಗುಪ್ತಚರ ಮಾಹಿತಿ ಆಧಾರದಲ್ಲಿ ಅವರ ಮೇಲೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಡ್ರಗ್ಸ್ ಮಾಫಿಯಾ ಕಿಂಗ್‌ಪಿನ್‌ಗೂ ಶಾಕ್: ಸಜೀವ ಗುಂಡುಗಳೂ ವಶ
ಈ ದಾಳಿಯಲ್ಲಿ ಡ್ರಗ್ಸ್ ಜಾಲದ ಪ್ರಮುಖ ಕಿಂಗ್‌ಪಿನ್ ಅಬ್ದುಲ್ ಫೈಸಲ್‌ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಸಜೀವ ಗುಂಡುಗಳನ್ನೂ ವಶಪಡಿಸಿಕೊಂಡಿದ್ದು, ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ.

6 ತಿಂಗಳ ಕಾರ್ಯಾಚರಣೆ: ಹೈದರನಿಂದ ಆರಂಭಗೊಂಡ ತನಿಖೆ
ಈ ಡ್ರಗ್ಸ್ ಜಾಲದ ಸುಳಿವು ಸುಮಾರು ಆರು ತಿಂಗಳ ಹಿಂದೆ ದೊರಕಿತು. ಮಂಗಳೂರಿನ ಪಂಪ್‌ವೆಲ್ ಬಳಿ ಹೈದರ್ ಎಂಬಾತನನ್ನು ಬಂಧಿಸಿದ್ದ ಪೊಲೀಸರು, ಆತನ ಬಳಿ 15 ಗ್ರಾಂ ಮಾದಕ ವಸ್ತು ವಶಪಡಿಸಿದ್ದರು. ತನಿಖೆ ಮುಂದುವರಿಸಿದ ಪೊಲೀಸರು, ಈ ಮಾಫಿಯಾ ಜಾಲದ ಬೇರುಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆಯನ್ನು ತೀವ್ರಗೊಳಿಸಿದರು.

ಈ ಪ್ರಕರಣದಲ್ಲಿ ನೈಜೀರಿಯಾ ಮೂಲದ ಪೀಟರ್ ಎಂಬಾತನ ಬಂಧನ ಪ್ರಮುಖ ತಿರುವು ತಂದುಕೊಟ್ಟಿತು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪೊಲೀಸರು, ಆ ಮಾಹಿತಿ ಆಧರಿಸಿ ಮತ್ತಷ್ಟು ತನಿಖೆ ನಡೆಸಿ, ಕೊನೆಗೆ ಬಂಬಾ ಫಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಪತ್ತೆ ಹಚ್ಚಿ ಬಂಧಿಸಿದರು.

ಮಂಗಳೂರು ಪೊಲೀಸ್ ಕಮಿಷನರ್ ಪ್ರತಿಕ್ರಿಯೆ
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಇದು ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಭೇದಿ. ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆಯ ಫಲಿತಾಂಶ ಇದಾಗಿದೆ. ನಾವು ಈ ಮಾಫಿಯಾ ಜಾಲದ ಮಾಸ್ಟರ್‌ಮೈಂಡ್‌ಗಳನ್ನೂ ಪತ್ತೆ ಮಾಡಿ ಕಾನೂನಿನ ಮುಂದೆ ತರಲು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ.

ತೀವ್ರ ತನಿಖೆ ಮುಂದುವರಿಯಲಿದೆ
ಈ ಬಂಧನದೊಂದಿಗೆ ಪ್ರಕರಣ ಮುಕ್ತಾಯವಾಗಿಲ್ಲ. ಪೊಲೀಸರ ತನಿಖೆ ಇನ್ನೂ ಮುಂದುವರಿದಿದ್ದು, ಈ ಜಾಲಕ್ಕೆ ಸಂಬಂಧಿಸಿದ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಉದ್ದೇಶದಿಂದ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

5 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

5 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

6 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

6 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

7 hours ago