Categories: CrimeLatest

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು ಬಂಧಿಸಿದ್ದಾರೆ. ವಿವಿಧ ಠಾಣೆಗಳ ಸಂಯುಕ್ತ ದಾಳಿಯಲ್ಲಿ ₹36.67 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ಬಾಗಲೂರು, ಆಡುಗೋಡಿ, ಚಿಕ್ಕಜಾಲ, ಎಚ್‌ಎಸ್‌ಆರ್‌ ಲೇಔಟ್‌, ಯಶವಂತಪುರ, ಜಾಲಹಳ್ಳಿ ಮತ್ತು ಜ್ಞಾನಭಾರತಿ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯಲ್ಲಿ 9.64 ಗ್ರಾಂ ಎಂಡಿಎಂಎ, 5 ಕೆಜಿ ಹೈಡ್ರೋ ಗಾಂಜಾ, 19,755 ಎಲ್‌ಎಸ್‌ಡಿ ಸ್ಟ್ರಿಪ್ಸ್‌, 11.4 ಕೆಜಿ ಗಾಂಜಾ, 156 ಗ್ರಾಂ ಹೆರಾಯಿನ್‌, 618 ಗ್ರಾಂ ಚರಸ್ ಹಾಗೂ 332 ಗ್ರಾಂ ಕೊಕೇನ್ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ಜಪ್ತಿಯಾಗಿದೆ.

ಬಂಧಿತರ ಪೈಕಿ ನಾಲ್ವರು ವಿದೇಶಿ ಪ್ರಜೆಗಳು, ಎಂಟು ಮಂದಿ ಹೊರ ರಾಜ್ಯದವರು ಮತ್ತು ನಾಲ್ವರು ಸ್ಥಳೀಯರು ಸೇರಿದ್ದಾರೆ. ಆರೋಪಿಗಳು ಅಂತರ್‌ರಾಜ್ಯ ಹಾಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕ ಹೊಂದಿದ್ದು, ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುಗಳನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

₹11 ಕೋಟಿ ಮೌಲ್ಯದ ಎಲ್‌ಎಸ್‌ಡಿ ವಶ

ಬಾಗಲೂರು ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಮಹಮ್ಮದ್ ರಫಿ ಮತ್ತು ಅಜ್ಮಲ್ ಎಂಬ ಇಬ್ಬರನ್ನು ಬಂಧಿಸಿ, ₹11.87 ಕೋಟಿ ಮೌಲ್ಯದ 19,755 ಎಲ್‌ಎಸ್‌ಡಿ ಸ್ಟ್ರಿಪ್ಸ್ ಹಾಗೂ 315 ಗ್ರಾಂ ಚರಸ್ ವಶಪಡಿಸಿಕೊಂಡಿದ್ದಾರೆ. ರಫಿ ವೃತ್ತಿಪರ ಡ್ರಗ್ಸ್ ಪೆಡ್ಲರ್ ಆಗಿದ್ದು, ಬಟ್ಟೆ ವ್ಯಾಪಾರದ ಆವರಣದಲ್ಲಿ ಈ ದಂಧೆ ನಡೆಸುತ್ತಿದ್ದನೆಂದು ತಿಳಿದುಬಂದಿದೆ. ಥೈಲ್ಯಾಂಡ್‌ಗೆ ತೆರಳಿ ಅಲ್ಲಿಂದ ಡ್ರಗ್ಸ್ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ವಿದೇಶಿಯರಿಂದ ₹17.5 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ

ಸಿಸಿಬಿ ನಡೆಸಿದ ಮತ್ತೊಂದು ದಾಳಿಯಲ್ಲಿ ನೈಜೀರಿಯಾ ಮೂಲದ ವಾಲೆಂಟಿನ್ ನಾಲ್ವಬ್ಲಿ ಮತ್ತು ಅಬ್ರೋಸ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇವರಿಂದ 5.155 ಕೆಜಿ ಎಂಡಿಎಂಎ, 5.195 ಗ್ರಾಂ ಹೈಡ್ರೋ ಗಾಂಜಾ, 332 ಗ್ರಾಂ ಕೊಕೇನ್ ಹಾಗೂ 315 ಗ್ರಾಂ ಗಮ್ಮೀಸ್ ಸೇರಿ ₹17.50 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿಸಿಬಿ ಡಿಸಿಪಿ-2 ರಾಜಾ ಇಮಾಮ್ ಕಾಸಿಂ ಮಾರ್ಗದರ್ಶನದಲ್ಲಿ ಎಸಿಪಿ ಎಂ.ಎನ್‌. ನಾಗರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

4 ತಿಂಗಳಲ್ಲಿ ₹130 ಕೋಟಿ ಡ್ರಗ್ಸ್ ಜಪ್ತಿ

ಬೆಂಗಳೂರು ಪೊಲೀಸರು ಕಳೆದ ನಾಲ್ಕು ತಿಂಗಳಲ್ಲಿ ₹130 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, 2,600ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ 256 ಮಂದಿ ಪೆಡ್ಲರ್‌ಗಳು ಮತ್ತು 1,703 ಮಂದಿ ವ್ಯಸನಿಗಳು ಸೇರಿದ್ದಾರೆ. ಒಟ್ಟು 1,959 ಪ್ರಕರಣಗಳು ದಾಖಲಾಗಿದ್ದು, ಬಂಧಿತರ ಪೈಕಿ 2,591 ಮಂದಿ ಸ್ಥಳೀಯರು ಹಾಗೂ 21 ಮಂದಿ ವಿದೇಶಿಯರು ಸೇರಿದ್ದಾರೆ.

ಡ್ರಗ್ಸ್ ಜಾಲವನ್ನು ನಿರ್ಮೂಲ ಮಾಡುವ ನಿಟ್ಟಿನಲ್ಲಿ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆ ಶ್ಲಾಘನೀಯ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. “ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕಠಿಣ ಕ್ರಮಗಳು ಮುಂದುವರೆಯುತ್ತವೆ. ಯಾರೇ ಈ ದಂಧೆಯಲ್ಲಿ ತೊಡಗಿದರೂ ಕಾನೂನು ಕ್ರಮ ತಪ್ಪದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕೊಡಗು ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಸಾವು: ‘ಹನಿಟ್ರ್ಯಾಪ್‌, ಸುಳ್ಳು ಪ್ರಕರಣ’ ಆರೋಪಗಳಿಂದ ಪ್ರಕರಣಕ್ಕೆ ಹೊಸ ತಿರುವು

ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…

2 hours ago

ಶಿವಾಜಿನಗರ ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

2 hours ago

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

18 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

18 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

20 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

20 hours ago