Latest

ಮಠದ ಭೂಮಿ ಹಗರಣ: ಕಾಂಗ್ರೆಸ್ ನಾಯಕಿ ಮತ್ತು ಪತಿಯ ವಿರುದ್ಧ ಭೂಅಕ್ರಮದ ಆರೋಪ.

ಗದಗ: ಶಿವಮೊಗ್ಗ ಜಿಲ್ಲೆಯ ಕೂಡ್ಲಿ ಶೃಂಗೇರಿ ಮಠಕ್ಕೆ ಸೇರಿದ್ದ ಮೌಲ್ಯಮತ್ತಾದ ಜಮೀನನ್ನು ಕಾನೂನು ಬಾಹಿರವಾಗಿ ತನ್ನ ಹೆಸರಿಗೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಈ ಹಗರಣದಲ್ಲಿ ಮಹಿಳಾ ಕಾಂಗ್ರೆಸ್ ನಾಯಕಿ ಸುಜಾತಾ ದೊಡ್ಡಮನಿ ಮತ್ತು ಅವರ ಪತಿ ನಿಂಗಪ್ಪ ದೊಡ್ಡಮನಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ತೆಗ್ಗಿನಭಾನೂರ ಗ್ರಾಮದಲ್ಲಿ ಸರ್ವೇ ನಂ. 63 ಮತ್ತು 54ರಲ್ಲಿ ಮಠದ ಒಟ್ಟು 21 ಎಕರೆ ಜಮೀನಿದೆ. ಈ ಜಮೀನನ್ನು ಕೇವಲ ಕಾಗದದ ಲೆಕ್ಕದಲ್ಲಿ ಕಬಳಿಸಿ ಸುಜಾತಾ ದೊಡ್ಡಮನಿ ಅವರ ಹೆಸರಿಗೆ ಬದಲಾಯಿಸಲು ಪತಿ-ಪತ್ನಿ ಸಂಚು ರೂಪಿಸಿದ್ದಾರೆಯೆಂದು ಸ್ಥಳೀಯ ಪೋಕಳಾ ವಾರಸುದಾರರು ಆರೋಪಿಸಿದ್ದಾರೆ.

ನಿಂಗಪ್ಪ ದೊಡ್ಡಮನಿ ಶಿರಹಟ್ಟಿ ಉಪ ತಹಶೀಲ್ದಾರ್ ಆಗಿ ಸೇವೆ ನಿರ್ವಹಿಸುತ್ತಿದ್ದ ವೇಳೆ ಈ ಜಮೀನಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರೆಂದು ತಿಳಿದು ಬಂದಿದೆ. ನಂತರ ರಾಜಕೀಯ ಪ್ರಭಾವ ಮತ್ತು ಆಡಳಿತಾತ್ಮಕ ಸಂಪರ್ಕಗಳನ್ನು ಬಳಸಿಕೊಂಡು ಜಮೀನನ್ನು ಕಾನೂನು ವಿರುದ್ಧವಾಗಿ ತಮ್ಮ ಹೆಸರಿಗೆ ಬದಲಾಯಿಸಲು ಹೆಣಗೊಂಡಿದ್ದಾರೆ ಎಂಬುದು ದೂರುದಾರರ ವಾದ.

ಈ ಜಮೀನಿಗೆ ಪೋಕಳಾ ಹಕ್ಕುದಾರರು ಇರುವುದರಿಂದ, ಅವರ ಅನುಮತಿಯಿಲ್ಲದೇ ಜಮೀನು ಮಾರಾಟ ಅಥವಾ ಹಕ್ಕು ಬದಲಾವಣೆ ಸಾಧ್ಯವಿಲ್ಲ. ಆದರೆ ಶಿರಹಟ್ಟಿ ತಹಶೀಲ್ದಾರ ಶರಣಪ್ಪ ಪವಾರ್ ಮತ್ತು ಸಬ್‌ರಿಜಿಸ್ಟ್ರಾರ್ ಅಧಿಕಾರಿಗಳು ಲಂಚದ ಆಸೆಗೆ ಮಣಿದು, ಸೂಕ್ತ ದಾಖಲೆಗಳಿಲ್ಲದೇ ಹಕ್ಕು ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವೂ ಹೊರಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೋಕಳಾ ಕುಟುಂಬಗಳು ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದು, ಭೂಹಗರಣದ ತನಿಖೆ ನಡೆಸಿ ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಮಠದ ಆಸ್ತಿಗಳನ್ನು ದುರುಪಯೋಗಪಡಿಸಿಕೊಳ್ಳಲು ನಡೆಯುವ ಇಂತಹ ಸಂಚುಗಳು ಧಾರ್ಮಿಕ ಸಂಸ್ಥೆಗಳ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.

ಘಟನೆ ಸಂಬಂಧ ಮುಂದಿನ ದಿನಗಳಲ್ಲಿ ತನಿಖಾ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬುದರತ್ತ ಸಾರ್ವಜನಿಕರು ಹಾಗೂ ಮಠದ ನಂಬಿಕಸ್ಥರು ಕಣ್ಣಿಟ್ಟಿದ್ದಾರೆ.

nazeer ahamad

Recent Posts

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

2 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

22 minutes ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago