Latest

ಮಠದ ಭೂಮಿ ಹಗರಣ: ಕಾಂಗ್ರೆಸ್ ನಾಯಕಿ ಮತ್ತು ಪತಿಯ ವಿರುದ್ಧ ಭೂಅಕ್ರಮದ ಆರೋಪ.

ಗದಗ: ಶಿವಮೊಗ್ಗ ಜಿಲ್ಲೆಯ ಕೂಡ್ಲಿ ಶೃಂಗೇರಿ ಮಠಕ್ಕೆ ಸೇರಿದ್ದ ಮೌಲ್ಯಮತ್ತಾದ ಜಮೀನನ್ನು ಕಾನೂನು ಬಾಹಿರವಾಗಿ ತನ್ನ ಹೆಸರಿಗೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಈ ಹಗರಣದಲ್ಲಿ ಮಹಿಳಾ ಕಾಂಗ್ರೆಸ್ ನಾಯಕಿ ಸುಜಾತಾ ದೊಡ್ಡಮನಿ ಮತ್ತು ಅವರ ಪತಿ ನಿಂಗಪ್ಪ ದೊಡ್ಡಮನಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ತೆಗ್ಗಿನಭಾನೂರ ಗ್ರಾಮದಲ್ಲಿ ಸರ್ವೇ ನಂ. 63 ಮತ್ತು 54ರಲ್ಲಿ ಮಠದ ಒಟ್ಟು 21 ಎಕರೆ ಜಮೀನಿದೆ. ಈ ಜಮೀನನ್ನು ಕೇವಲ ಕಾಗದದ ಲೆಕ್ಕದಲ್ಲಿ ಕಬಳಿಸಿ ಸುಜಾತಾ ದೊಡ್ಡಮನಿ ಅವರ ಹೆಸರಿಗೆ ಬದಲಾಯಿಸಲು ಪತಿ-ಪತ್ನಿ ಸಂಚು ರೂಪಿಸಿದ್ದಾರೆಯೆಂದು ಸ್ಥಳೀಯ ಪೋಕಳಾ ವಾರಸುದಾರರು ಆರೋಪಿಸಿದ್ದಾರೆ.

ನಿಂಗಪ್ಪ ದೊಡ್ಡಮನಿ ಶಿರಹಟ್ಟಿ ಉಪ ತಹಶೀಲ್ದಾರ್ ಆಗಿ ಸೇವೆ ನಿರ್ವಹಿಸುತ್ತಿದ್ದ ವೇಳೆ ಈ ಜಮೀನಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರೆಂದು ತಿಳಿದು ಬಂದಿದೆ. ನಂತರ ರಾಜಕೀಯ ಪ್ರಭಾವ ಮತ್ತು ಆಡಳಿತಾತ್ಮಕ ಸಂಪರ್ಕಗಳನ್ನು ಬಳಸಿಕೊಂಡು ಜಮೀನನ್ನು ಕಾನೂನು ವಿರುದ್ಧವಾಗಿ ತಮ್ಮ ಹೆಸರಿಗೆ ಬದಲಾಯಿಸಲು ಹೆಣಗೊಂಡಿದ್ದಾರೆ ಎಂಬುದು ದೂರುದಾರರ ವಾದ.

ಈ ಜಮೀನಿಗೆ ಪೋಕಳಾ ಹಕ್ಕುದಾರರು ಇರುವುದರಿಂದ, ಅವರ ಅನುಮತಿಯಿಲ್ಲದೇ ಜಮೀನು ಮಾರಾಟ ಅಥವಾ ಹಕ್ಕು ಬದಲಾವಣೆ ಸಾಧ್ಯವಿಲ್ಲ. ಆದರೆ ಶಿರಹಟ್ಟಿ ತಹಶೀಲ್ದಾರ ಶರಣಪ್ಪ ಪವಾರ್ ಮತ್ತು ಸಬ್‌ರಿಜಿಸ್ಟ್ರಾರ್ ಅಧಿಕಾರಿಗಳು ಲಂಚದ ಆಸೆಗೆ ಮಣಿದು, ಸೂಕ್ತ ದಾಖಲೆಗಳಿಲ್ಲದೇ ಹಕ್ಕು ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವೂ ಹೊರಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೋಕಳಾ ಕುಟುಂಬಗಳು ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದು, ಭೂಹಗರಣದ ತನಿಖೆ ನಡೆಸಿ ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಮಠದ ಆಸ್ತಿಗಳನ್ನು ದುರುಪಯೋಗಪಡಿಸಿಕೊಳ್ಳಲು ನಡೆಯುವ ಇಂತಹ ಸಂಚುಗಳು ಧಾರ್ಮಿಕ ಸಂಸ್ಥೆಗಳ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.

ಘಟನೆ ಸಂಬಂಧ ಮುಂದಿನ ದಿನಗಳಲ್ಲಿ ತನಿಖಾ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬುದರತ್ತ ಸಾರ್ವಜನಿಕರು ಹಾಗೂ ಮಠದ ನಂಬಿಕಸ್ಥರು ಕಣ್ಣಿಟ್ಟಿದ್ದಾರೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

5 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago