ಗದಗ: ಶಿವಮೊಗ್ಗ ಜಿಲ್ಲೆಯ ಕೂಡ್ಲಿ ಶೃಂಗೇರಿ ಮಠಕ್ಕೆ ಸೇರಿದ್ದ ಮೌಲ್ಯಮತ್ತಾದ ಜಮೀನನ್ನು ಕಾನೂನು ಬಾಹಿರವಾಗಿ ತನ್ನ ಹೆಸರಿಗೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಈ ಹಗರಣದಲ್ಲಿ ಮಹಿಳಾ ಕಾಂಗ್ರೆಸ್ ನಾಯಕಿ ಸುಜಾತಾ ದೊಡ್ಡಮನಿ ಮತ್ತು ಅವರ ಪತಿ ನಿಂಗಪ್ಪ ದೊಡ್ಡಮನಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ತೆಗ್ಗಿನಭಾನೂರ ಗ್ರಾಮದಲ್ಲಿ ಸರ್ವೇ ನಂ. 63 ಮತ್ತು 54ರಲ್ಲಿ ಮಠದ ಒಟ್ಟು 21 ಎಕರೆ ಜಮೀನಿದೆ. ಈ ಜಮೀನನ್ನು ಕೇವಲ ಕಾಗದದ ಲೆಕ್ಕದಲ್ಲಿ ಕಬಳಿಸಿ ಸುಜಾತಾ ದೊಡ್ಡಮನಿ ಅವರ ಹೆಸರಿಗೆ ಬದಲಾಯಿಸಲು ಪತಿ-ಪತ್ನಿ ಸಂಚು ರೂಪಿಸಿದ್ದಾರೆಯೆಂದು ಸ್ಥಳೀಯ ಪೋಕಳಾ ವಾರಸುದಾರರು ಆರೋಪಿಸಿದ್ದಾರೆ.
ನಿಂಗಪ್ಪ ದೊಡ್ಡಮನಿ ಶಿರಹಟ್ಟಿ ಉಪ ತಹಶೀಲ್ದಾರ್ ಆಗಿ ಸೇವೆ ನಿರ್ವಹಿಸುತ್ತಿದ್ದ ವೇಳೆ ಈ ಜಮೀನಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರೆಂದು ತಿಳಿದು ಬಂದಿದೆ. ನಂತರ ರಾಜಕೀಯ ಪ್ರಭಾವ ಮತ್ತು ಆಡಳಿತಾತ್ಮಕ ಸಂಪರ್ಕಗಳನ್ನು ಬಳಸಿಕೊಂಡು ಜಮೀನನ್ನು ಕಾನೂನು ವಿರುದ್ಧವಾಗಿ ತಮ್ಮ ಹೆಸರಿಗೆ ಬದಲಾಯಿಸಲು ಹೆಣಗೊಂಡಿದ್ದಾರೆ ಎಂಬುದು ದೂರುದಾರರ ವಾದ.
ಈ ಜಮೀನಿಗೆ ಪೋಕಳಾ ಹಕ್ಕುದಾರರು ಇರುವುದರಿಂದ, ಅವರ ಅನುಮತಿಯಿಲ್ಲದೇ ಜಮೀನು ಮಾರಾಟ ಅಥವಾ ಹಕ್ಕು ಬದಲಾವಣೆ ಸಾಧ್ಯವಿಲ್ಲ. ಆದರೆ ಶಿರಹಟ್ಟಿ ತಹಶೀಲ್ದಾರ ಶರಣಪ್ಪ ಪವಾರ್ ಮತ್ತು ಸಬ್ರಿಜಿಸ್ಟ್ರಾರ್ ಅಧಿಕಾರಿಗಳು ಲಂಚದ ಆಸೆಗೆ ಮಣಿದು, ಸೂಕ್ತ ದಾಖಲೆಗಳಿಲ್ಲದೇ ಹಕ್ಕು ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವೂ ಹೊರಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೋಕಳಾ ಕುಟುಂಬಗಳು ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದು, ಭೂಹಗರಣದ ತನಿಖೆ ನಡೆಸಿ ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಮಠದ ಆಸ್ತಿಗಳನ್ನು ದುರುಪಯೋಗಪಡಿಸಿಕೊಳ್ಳಲು ನಡೆಯುವ ಇಂತಹ ಸಂಚುಗಳು ಧಾರ್ಮಿಕ ಸಂಸ್ಥೆಗಳ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.
ಘಟನೆ ಸಂಬಂಧ ಮುಂದಿನ ದಿನಗಳಲ್ಲಿ ತನಿಖಾ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬುದರತ್ತ ಸಾರ್ವಜನಿಕರು ಹಾಗೂ ಮಠದ ನಂಬಿಕಸ್ಥರು ಕಣ್ಣಿಟ್ಟಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…