ಕಲಬುರ್ಗಿ: ಕಳೆದ ಕೆಲವು ದಿನಗಳ ಹಿಂದೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಬಿಟ್ಟು ವೈದ್ಯಕೀಯ ಎಡವಟ್ಟು ನಡೆದಿದೆ ಎಂಬ ಪ್ರಕರಣ ಮಾಸುವ ಮುನ್ನವೇ, ಜಿಲ್ಲೆಯಲ್ಲಿ ಮತ್ತೊಂದು ಬಾಣಂತಿಯ ಸಾವಿನ ಘಟನೆ ನಡೆದಿದೆ.
ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ 32 ವರ್ಷದ ಶಿಲ್ಪಾ ಎಂಬ ಯುವತಿ ಈ ಘಟನೆಯ ದುರ್ದೈವಿ. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಅವರು ಕಲಬುರ್ಗಿಯ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದರು.
ಅಂದೇ ಗಂಡು ಮಗುವಿಗೆ ಜನ್ಮ ನೀಡಿದ ಶಿಲ್ಪಾ, ನಿರಂತರ ರಕ್ತಸ್ರಾವದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ವೈದ್ಯರು ಅಹರಹರಾಗಿ ರಕ್ತ ನೀಡಿದರೂ, ಮಂಗಳವಾರ ಬೆಳಿಗ್ಗೆ ಅವರ ಜೀವ ಉಳಿಯಲಿಲ್ಲ.
ಈ ದುರ್ಘಟನೆ ಬಗ್ಗೆ ಶಿಲ್ಪಾದ ಕುಟುಂಬ ಸದಸ್ಯರು ಕಿಡಿಕಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಮರಣಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ವೈದ್ಯರು ಶಿಲ್ಪಾ ಲೋ ಬಿಪಿಯ (ಅಲ್ಪ ರಕ್ತೊತ್ತಡ) ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…