ಹಾವೇರಿ: ಕರ್ತವ್ಯ ವೇಳೆಯಲ್ಲಿ ಕಚೇರಿಗೆ ಹಾಜರಾಗದ ಕಾರಣಕ್ಕೆ ಮೆಡ್ಲೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ರವಿಕುಮಾರ್ ಎಚ್. ಅವರನ್ನು ಅಮಾನತುಗೊಳಿಸಲಾಗಿದೆ.
ರವಿಕುಮಾರ್ ರವರು ರಾಹುತನಕಟ್ಟಿಯಲ್ಲಿ ಸ್ಥಾಯಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ತಾತ್ಕಾಲಿಕವಾಗಿ ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಸಹ ಪ್ರಭಾರ ಪಿಡಿಒ ಆಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ರುಚಿ ಬಿಂದಲ್ ಅವರು ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಹಠಾತ್ ಭೇಟಿ ನೀಡಿದ ಸಂದರ್ಭದಲ್ಲಿ, ಪಿಡಿಒ ಕಚೇರಿಗೆ ಹಾಜರಾಗಿರಲಿಲ್ಲ. ತಕ್ಷಣವೇ ಅವರು ರಾಹುತನಕಟ್ಟಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿದಾಗ, ಅಲ್ಲಿಯೂ ಪಿಡಿಒ ಉಪಸ್ಥಿತರಿರಲಿಲ್ಲ.
ಕರ್ತವ್ಯ ಕಾಲದಲ್ಲಿ ಕಾರ್ಯಸ್ಥಳದಲ್ಲಿ ಲಭ್ಯವಿರದಿರುವುದು ಸರ್ವಸಾಧಾರಣ ನಿರ್ಲಕ್ಷ್ಯವೆಂದು ಪರಿಗಣಿಸಿದ ಸಿಇಒ, ಪಿಡಿಒ ರವಿಕುಮಾರ್ ಎಚ್. ವಿರುದ್ಧ ತಾತ್ಕಾಲಿಕ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗಲಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…