ಹಾವೇರಿ: ಕರ್ತವ್ಯ ವೇಳೆಯಲ್ಲಿ ಕಚೇರಿಗೆ ಹಾಜರಾಗದ ಕಾರಣಕ್ಕೆ ಮೆಡ್ಲೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ರವಿಕುಮಾರ್ ಎಚ್. ಅವರನ್ನು ಅಮಾನತುಗೊಳಿಸಲಾಗಿದೆ.
ರವಿಕುಮಾರ್ ರವರು ರಾಹುತನಕಟ್ಟಿಯಲ್ಲಿ ಸ್ಥಾಯಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ತಾತ್ಕಾಲಿಕವಾಗಿ ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಸಹ ಪ್ರಭಾರ ಪಿಡಿಒ ಆಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ರುಚಿ ಬಿಂದಲ್ ಅವರು ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಹಠಾತ್ ಭೇಟಿ ನೀಡಿದ ಸಂದರ್ಭದಲ್ಲಿ, ಪಿಡಿಒ ಕಚೇರಿಗೆ ಹಾಜರಾಗಿರಲಿಲ್ಲ. ತಕ್ಷಣವೇ ಅವರು ರಾಹುತನಕಟ್ಟಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿದಾಗ, ಅಲ್ಲಿಯೂ ಪಿಡಿಒ ಉಪಸ್ಥಿತರಿರಲಿಲ್ಲ.
ಕರ್ತವ್ಯ ಕಾಲದಲ್ಲಿ ಕಾರ್ಯಸ್ಥಳದಲ್ಲಿ ಲಭ್ಯವಿರದಿರುವುದು ಸರ್ವಸಾಧಾರಣ ನಿರ್ಲಕ್ಷ್ಯವೆಂದು ಪರಿಗಣಿಸಿದ ಸಿಇಒ, ಪಿಡಿಒ ರವಿಕುಮಾರ್ ಎಚ್. ವಿರುದ್ಧ ತಾತ್ಕಾಲಿಕ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…