ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ನಾಗ್ಪುರ ಮೂಲದ 29 ವರ್ಷದ ರೋಹಿತ್ ಲಾಲ್ ಮೃತ ವ್ಯಕ್ತಿ. ಇವರು ದೆಹಲಿಯ ‘ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ’ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
ಗುರುವಾರ ಬೆಳಿಗ್ಗೆ ಸಹೋದ್ಯೋಗಿಯ ಕರೆಗಳಿಗೆ ಪ್ರತಿಕ್ರಿಯಿಸದಿದ್ದರಿಂದ ಅನುಮಾನಗೊಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ರೋಹಿತ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಲೈಂಗಿಕ ಉತ್ತೇಜಕ ಮಾತ್ರೆಗಳ ಖಾಲಿ ಪ್ಯಾಕೆಟ್ಗಳು ಹಾಗೂ ವಿವಿಧ ಆರೋಗ್ಯ ಪೂರಕಗಳೂ ಪತ್ತೆಯಾಗಿವೆ.
ಪ್ರಾಥಮಿಕ ತನಿಖೆ ಪ್ರಕಾರ, ತನ್ನ ನಿಶ್ಚಿತ ವಧುವನ್ನು ಭೇಟಿಯಾಗುವ ಮುನ್ನ ಲೈಂಗಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಈ ಮಾತ್ರೆಗಳನ್ನು ಅತಿಯಾಗಿ ಸೇವಿಸಿರುವುದೇ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹದ ವಿಸೇರಾವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅಂತಿಮ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ.
ವೈದ್ಯರ ಸಲಹೆಯಿಲ್ಲದೆ ಇಂತಹ ಔಷಧಿಗಳನ್ನು ಸೇವಿಸುವುದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಎಚ್ಚರಿಕೆಯಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…