Categories: Latest

ಮುಂಡಗೋಡದಲ್ಲಿ ಯೂರಿಯಾ ಸಂಕಷ್ಟ ತಡೆಗೆ ಸಭೆ: ತಾಲೂಕು ರೈತರಿಗೆ ಮೊದಲ ಆದ್ಯತೆ ನೀಡಲು ಸೂಚನೆ

ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ ಸಭೆ ನಡೆಯಿತು.

ಇದೇವೇಳೆ ರಸಗೊಬ್ಬರ ಮಾರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಉಪ ಕೃಷಿಷನಿರ್ದೇಶಕರಾದ ಪಾಂಡು ಅವರು
ತಾಲೂಕಿನಲ್ಲಿ ಯೂರಿಯ ರಸಗೊಬ್ಬರ , ಸಮಸ್ಯೆ ಉಲ್ಬಣವಾಗದಂತೆ ಎಚ್ಚೆತ್ತುಕೊಳ್ಳಬೇಕಿದೆ. ನಮ್ಮ ಮುಂಡಗೋಡ ತಾಲೂಕಿನ ರೈತರಿಗೆ ಮೊದಲು ಪ್ರಾತಿನಿಧ್ಯ ನೀಡಬೇಕು, ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯ ರೈತರಿಗೆ ಯೂರಿಯಾ ನೀಡಬಾರದು ಎಂದು ಹೇಳಿದರು.

ಸಿಪಿಐ ರಂಗನಾಥ್ ನೀಲಮ್ಮನವರ
ಮಾತನಾಡಿ ಒಂದು ಎಕರೆಗೆ ಎರಡು ಪ್ಯಾಕೆಟ್ ಯೂರಿಯಾ ಮಾತ್ರ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳು
ಈಗಾಗಲೇ ಎಲ್ಲರಿಗೂ ನಿರ್ದೇಶನ ನೀಡಿದ್ದು, ಮೊದಲು ನಮ್ಮ ತಾಲೂಕಿನ ರೈತರಿಗೆ ತಪ್ಪದೆ ಪೂರೈಕೆ ಮಾಡಬೇಕು, ಸರ್ಕಾರ ನಿಗದಿಪಡಿಸಿದ ದರಕ್ಕೆ ಮಾತ್ರ ಮಾರಾಟ ಮಾಡಬೇಕು , ಶಿರಸಿ ಉಪವಿಭಾಗದ ಮಟ್ಟದಲ್ಲಿ ಮುಂಡಗೋಡ ತಾಲೂಕಿನಲ್ಲಿ ಯೂರಿಯಾಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿಚಕ್ಷಣಾ ದಳದ ಅಧಿಕಾರಿಯಾದ ಶಿವಾನಂದ ಹಾವೇರಿ ಮಾತನಾಡಿ ಯೂರಿಯಾ ಪೂರೈಕೆ ಕುರಿತಂತೆ ಸಮಿತಿ ಅಸ್ತಿತ್ವದಲ್ಲಿದ್ದು, ವಿಚಕ್ಷಣಾ ದಳ ಪ್ರತಿಯೊಂದು ಚಟುವಟಿಕೆಯನ್ನು ಗಮನಿಸುತ್ತಿರುತ್ತದೆ, ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯವರಿಗೆ ಪೂರೈಕೆ ಮಾಡುವುದು ಸೇರಿದಂತೆ ಅಕ್ರಮ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಂಗಾರು ಹಂಗಾಮಿಗೆ ಸಾಕಾಗುವಷ್ಟು ದಾಸ್ತಾನು ಕೇಂದ್ರದ
ಮಟ್ಟದಲ್ಲಿದೆ.ಅಂಗಡಿಯವರು ದಾಸ್ತಾನುಗಳನ್ನು ಪೋರ್ಟಲ್ ನಲ್ಲಿ ನಿರಂತರವಾಗಿ ನಮೂದಿಸಬೇಕು, ಎಫ್ ಐ ಡಿ ಇಲ್ಲದಿದ್ದರೆ ಯಾವುದೇ ಕಾರಣಕ್ಕೂ
ಯೂರಿಯಾ ಸಿಗುವುದಿಲ್ಲ.ಯೂರಿಯಾ ಮಾನಿಟರಿಂಗ್ ಪೋರ್ಟಲ್ ಇದ್ದು, ಎಫ್ ಐ ಡಿ ಮಾಡಿಸದ ರೈತರು ಕೂಡಲೇ ಎಫ್ ಐ ಡಿ ಮಾಡಿಸಬೇಕಿದೆ.
ಇದೇ ವೇಳೆ ಪತ್ರಕರ್ತರು ತಾಲೂಕಿನಲ್ಲಿ ಹಲವಾರು ರೈತರು ಅತಿಕ್ರಮಣದಾರರಿದ್ದು ಅವರಿಗೆ ಇದು ಸಮಸ್ಯೆ ಆಗಬಹುದು ಎಂದು ಕೇಳಿದಾಗ ಸಹಾಯಕ ಕೃಷಿ ನಿರ್ದೇಶಕರಾದ ಕೆ ಎನ್ ಮಹಾರೆಡ್ಡಿ ಅವರು ಈಗಾಗಲೇ ಈ ವಿಷಯದ ಕುರಿತು ಹಿರಿಯ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ ಎಂದರು.

ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಶಿರಸಿಯ ಉಪ ನಿರ್ದೇಶಕರು,ವಿಚಕ್ಷಣಾ ದಳದ ಅಧಿಕಾರಿ, ಮುಂಡಗೋಡ ಸಿಪಿಐ ರಂಗನಾಥ ನಿಲಮ್ಮನವರ್, ಸಹಾಯಕ ಕೃಷಿ ನಿರ್ದೇಶಕರಾದ ಕೆ ಎನ್ ಮಹಾರೆಡ್ಡಿ , ರಸಗೊಬ್ಬರ ಕಂಪನಿಯ ಪ್ರತಿನಿಧಿಗಳು ಹಾಗೂ ನಗರ ಹಾಗೂ ಗ್ರಾಮೀಣ ಭಾಗದ ರಸಗೊಬ್ಬರ ಮಾರಾಟಗಾರರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago