Categories: Latest

ಮುಂಡಗೋಡದಲ್ಲಿ ಯೂರಿಯಾ ಸಂಕಷ್ಟ ತಡೆಗೆ ಸಭೆ: ತಾಲೂಕು ರೈತರಿಗೆ ಮೊದಲ ಆದ್ಯತೆ ನೀಡಲು ಸೂಚನೆ

ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ ಸಭೆ ನಡೆಯಿತು.

ಇದೇವೇಳೆ ರಸಗೊಬ್ಬರ ಮಾರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಉಪ ಕೃಷಿಷನಿರ್ದೇಶಕರಾದ ಪಾಂಡು ಅವರು
ತಾಲೂಕಿನಲ್ಲಿ ಯೂರಿಯ ರಸಗೊಬ್ಬರ , ಸಮಸ್ಯೆ ಉಲ್ಬಣವಾಗದಂತೆ ಎಚ್ಚೆತ್ತುಕೊಳ್ಳಬೇಕಿದೆ. ನಮ್ಮ ಮುಂಡಗೋಡ ತಾಲೂಕಿನ ರೈತರಿಗೆ ಮೊದಲು ಪ್ರಾತಿನಿಧ್ಯ ನೀಡಬೇಕು, ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯ ರೈತರಿಗೆ ಯೂರಿಯಾ ನೀಡಬಾರದು ಎಂದು ಹೇಳಿದರು.

ಸಿಪಿಐ ರಂಗನಾಥ್ ನೀಲಮ್ಮನವರ
ಮಾತನಾಡಿ ಒಂದು ಎಕರೆಗೆ ಎರಡು ಪ್ಯಾಕೆಟ್ ಯೂರಿಯಾ ಮಾತ್ರ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳು
ಈಗಾಗಲೇ ಎಲ್ಲರಿಗೂ ನಿರ್ದೇಶನ ನೀಡಿದ್ದು, ಮೊದಲು ನಮ್ಮ ತಾಲೂಕಿನ ರೈತರಿಗೆ ತಪ್ಪದೆ ಪೂರೈಕೆ ಮಾಡಬೇಕು, ಸರ್ಕಾರ ನಿಗದಿಪಡಿಸಿದ ದರಕ್ಕೆ ಮಾತ್ರ ಮಾರಾಟ ಮಾಡಬೇಕು , ಶಿರಸಿ ಉಪವಿಭಾಗದ ಮಟ್ಟದಲ್ಲಿ ಮುಂಡಗೋಡ ತಾಲೂಕಿನಲ್ಲಿ ಯೂರಿಯಾಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿಚಕ್ಷಣಾ ದಳದ ಅಧಿಕಾರಿಯಾದ ಶಿವಾನಂದ ಹಾವೇರಿ ಮಾತನಾಡಿ ಯೂರಿಯಾ ಪೂರೈಕೆ ಕುರಿತಂತೆ ಸಮಿತಿ ಅಸ್ತಿತ್ವದಲ್ಲಿದ್ದು, ವಿಚಕ್ಷಣಾ ದಳ ಪ್ರತಿಯೊಂದು ಚಟುವಟಿಕೆಯನ್ನು ಗಮನಿಸುತ್ತಿರುತ್ತದೆ, ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯವರಿಗೆ ಪೂರೈಕೆ ಮಾಡುವುದು ಸೇರಿದಂತೆ ಅಕ್ರಮ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಂಗಾರು ಹಂಗಾಮಿಗೆ ಸಾಕಾಗುವಷ್ಟು ದಾಸ್ತಾನು ಕೇಂದ್ರದ
ಮಟ್ಟದಲ್ಲಿದೆ.ಅಂಗಡಿಯವರು ದಾಸ್ತಾನುಗಳನ್ನು ಪೋರ್ಟಲ್ ನಲ್ಲಿ ನಿರಂತರವಾಗಿ ನಮೂದಿಸಬೇಕು, ಎಫ್ ಐ ಡಿ ಇಲ್ಲದಿದ್ದರೆ ಯಾವುದೇ ಕಾರಣಕ್ಕೂ
ಯೂರಿಯಾ ಸಿಗುವುದಿಲ್ಲ.ಯೂರಿಯಾ ಮಾನಿಟರಿಂಗ್ ಪೋರ್ಟಲ್ ಇದ್ದು, ಎಫ್ ಐ ಡಿ ಮಾಡಿಸದ ರೈತರು ಕೂಡಲೇ ಎಫ್ ಐ ಡಿ ಮಾಡಿಸಬೇಕಿದೆ.
ಇದೇ ವೇಳೆ ಪತ್ರಕರ್ತರು ತಾಲೂಕಿನಲ್ಲಿ ಹಲವಾರು ರೈತರು ಅತಿಕ್ರಮಣದಾರರಿದ್ದು ಅವರಿಗೆ ಇದು ಸಮಸ್ಯೆ ಆಗಬಹುದು ಎಂದು ಕೇಳಿದಾಗ ಸಹಾಯಕ ಕೃಷಿ ನಿರ್ದೇಶಕರಾದ ಕೆ ಎನ್ ಮಹಾರೆಡ್ಡಿ ಅವರು ಈಗಾಗಲೇ ಈ ವಿಷಯದ ಕುರಿತು ಹಿರಿಯ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ ಎಂದರು.

ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಶಿರಸಿಯ ಉಪ ನಿರ್ದೇಶಕರು,ವಿಚಕ್ಷಣಾ ದಳದ ಅಧಿಕಾರಿ, ಮುಂಡಗೋಡ ಸಿಪಿಐ ರಂಗನಾಥ ನಿಲಮ್ಮನವರ್, ಸಹಾಯಕ ಕೃಷಿ ನಿರ್ದೇಶಕರಾದ ಕೆ ಎನ್ ಮಹಾರೆಡ್ಡಿ , ರಸಗೊಬ್ಬರ ಕಂಪನಿಯ ಪ್ರತಿನಿಧಿಗಳು ಹಾಗೂ ನಗರ ಹಾಗೂ ಗ್ರಾಮೀಣ ಭಾಗದ ರಸಗೊಬ್ಬರ ಮಾರಾಟಗಾರರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago