Latest

ಗ್ರಾ.ಪಂ ಆಡಳಿತದಲ್ಲಿ ಪತ್ನಿಯ ಬದಲು ಪತಿಯ ಹಸ್ತಕ್ಷೇಪದಿಂದ ಮಾನಸಿಕ ಕಿರುಕುಳ; ಗ್ರಾ.ಪಂ ಸದಸ್ಯೆ ತಾಲೂಕು ಪಂಚಾಯತ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ.

ಕೊಟ್ಟೂರು:- ಅಂಬಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಹೊಳಲಮ್ಮ ನವರ ಪತಿ ಹನುಮಂತಪ್ಪ ಎಂಬುವವರ ಅಧಿಕಾರದ ಹಸ್ತಕ್ಷೇಪದಿಂದಾಗಿ ನನಗೆ ಮಾನಸಿಕ ಕಿರುಕುಳ ಉಂಟಾಗುತ್ತಿದೆ ಹಾಗೂ ಅನುದಾನದಲ್ಲಿ ತಾರತಮ್ಯವಾಗುತ್ತಿದೆ ಎಂದು ಕುಡಿತಿನಮಗ್ಗಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಲಲಿತ ಕಾಳಚಾರಿ ಯವರು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಕುರಿತು ಮಾತನಾಡಿದ ಅವರು
ನನಗೆ ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಯಾವುದೇ ಸಭೆಯಲ್ಲಿ ಆಗಲಿ ಅಥವಾ ಲೆಕ್ಕ ಪುಸ್ತಕದ ಬಗ್ಗೆ ಆಗಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಇದರ ಬಗ್ಗೆ ಕೇಳಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯವರ ಗಂಡ ಹನುಮಂತಪ್ಪ ನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ ನನಗೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಬೆದರಿಸುವ ಪ್ರಯತ್ನ ಮಾಡುತ್ತಾರೆ.ಇದರ ಸಂಬಂಧ ನನಗೆ ಯಾವುದೇ ಅನುದಾನ ನೀಡುತ್ತಿಲ್ಲ ಈಗಾದರೆ ನಾನು ವಾರ್ಡಿನಲ್ಲಿ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಹಾಗೂ ಹಿಂದೆ ಮಾಡಿರುವ ಕೆಲಸಗಳ ಬಿಲ್ ಗಳನ್ನು ಸಹ ತಡೆಹಿಡಿದು ಮಾನಸಿಕವಾಗಿ ಕುಗ್ಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಇದರಿಂದಾಗಿ ನನಗೆ ನ್ಯಾಯ ಬೇಕೇ ಬೇಕೆಂದು ಈ ಸತ್ಯಾಗ್ರಹವನ್ನು ನಡೆಸಲು ಮುಂದಾಗಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ನಿನ್ನೆ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಉನ್ನತ ಅಧಿಕಾರಿಗಳು, ರಾಜಕೀಯ ನಾಯಕರು, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂದು ಬರೀ ಟೊಳ್ಳು ಮಾತನಾಡಿದರೆ ಸಾಲದು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡವರನ್ನು ಸರಿ ಸಮಾನ ಅವಕಾಶಗಳು ದೊರಕಿಸಬೇಕು ಈ ರೀತಿ ಒಬ್ಬ ಗ್ರಾ.ಪಂ. ಮಹಿಳಾ ಸದಸ್ಯೆಯನ್ನು ದೌರ್ಜನ್ಯವಾಗಿ ನಡೆಸಿಕೊಂಡರೆ ಸರಿಯೇ ಮುಂದೆ ಈ ಘಟನೆಗಳು ಕಂಡು ಬಂದರೆ ಪ್ರತ್ಯಕ್ಷವಾಗಿ ಇವರ ಹೋರಾಟಕ್ಕೆ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಲಾಗುವುದು ಎಂದು ವಕೀಲ ಹನುಮಂತಪ್ಪ ಹಾಗೂ ರೈತ ಮುಖಂಡ ಗುಡಿಯಾರ ಮಲ್ಲಿಕಾರ್ಜುನ ನವರು ತಿಳಿಸಿದರು.

ನಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಕುಮಾರ್ ರವರು ಅಂಬಳಿ ಗ್ರಾಮ ಪಂಚಾಯಿತಿ ಪಿ ಡಿ ಒ ರವರನ್ನು ಸ್ಥಳಕ್ಕೆ ಕರೆಸಿ ವಾಸ್ತವ ಬಗ್ಗೆ ಚರ್ಚಿಸಿ ಇನ್ನು ಮುಂದೆ ಸಾಮಾನ್ಯ ಸಭೆಯಲ್ಲಿ ಪೊಲೀಸ್ ಸಹಾಯ ಪಡೆದು ಸಭೆಯನ್ನು ಮುಂದುವರೆಸಬೇಕು ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರು ಮಾತ್ರ ಪರಿಗಣಿಸಬೇಕು ಬೇರೆಯವರು ಸಭೆಯಲ್ಲಿ ಹಸ್ತಕ್ಷೇಪ ಮಾಡದಂತೆ ಸಭೆಯನ್ನು ನಡೆಸಬೇಕೆಂದು ಹೇಳಿದರು ಹಾಗೂ ಸದಸ್ಯೆ ಲಲಿತಮ್ಮ ನವರು ಮಾಡಿರುವ ಕೆಲಸ ಅಧಿಕೃತ ದಾಖಲೆಗಳನ್ನು ಪಡೆದು ಬೇಗನೆ ಬಿಲ್ ಮಾಡುವಂತೆ ಸೂಚಿಸಿದರು, ಅಧ್ಯಕ್ಷರನ್ನು ಸದಸ್ಯರು ಬಿಟ್ಟು ಅವರ ಸಂಬಂಧಿಕರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು ಇದು ಏನಾದರು ಮುಂದುವರೆದರೆ ಪೊಲೀಸ್ ದೂರು ನೀಡಿ ಎಂದು ಖಡಕ್ ಸೂಚನೆ ನೀಡಿದರು. ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿ ಧರಣಿಯನ್ನು ಹಿಂಪಡೆಯುವಂತೆ ಹೇಳಿದರು ಮಾನ್ಯ ಅಧಿಕಾರಿಗಳು ಸ್ಪಂದಿಸಿ ಧರಣಿಯನ್ನು ಹಿಂಪಡೆಯಲಾಯಿತು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

10 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

10 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

10 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago