Latest

ಗ್ರಾ.ಪಂ ಆಡಳಿತದಲ್ಲಿ ಪತ್ನಿಯ ಬದಲು ಪತಿಯ ಹಸ್ತಕ್ಷೇಪದಿಂದ ಮಾನಸಿಕ ಕಿರುಕುಳ; ಗ್ರಾ.ಪಂ ಸದಸ್ಯೆ ತಾಲೂಕು ಪಂಚಾಯತ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ.

ಕೊಟ್ಟೂರು:- ಅಂಬಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಹೊಳಲಮ್ಮ ನವರ ಪತಿ ಹನುಮಂತಪ್ಪ ಎಂಬುವವರ ಅಧಿಕಾರದ ಹಸ್ತಕ್ಷೇಪದಿಂದಾಗಿ ನನಗೆ ಮಾನಸಿಕ ಕಿರುಕುಳ ಉಂಟಾಗುತ್ತಿದೆ ಹಾಗೂ ಅನುದಾನದಲ್ಲಿ ತಾರತಮ್ಯವಾಗುತ್ತಿದೆ ಎಂದು ಕುಡಿತಿನಮಗ್ಗಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಲಲಿತ ಕಾಳಚಾರಿ ಯವರು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಕುರಿತು ಮಾತನಾಡಿದ ಅವರು
ನನಗೆ ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಯಾವುದೇ ಸಭೆಯಲ್ಲಿ ಆಗಲಿ ಅಥವಾ ಲೆಕ್ಕ ಪುಸ್ತಕದ ಬಗ್ಗೆ ಆಗಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಇದರ ಬಗ್ಗೆ ಕೇಳಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯವರ ಗಂಡ ಹನುಮಂತಪ್ಪ ನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ ನನಗೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಬೆದರಿಸುವ ಪ್ರಯತ್ನ ಮಾಡುತ್ತಾರೆ.ಇದರ ಸಂಬಂಧ ನನಗೆ ಯಾವುದೇ ಅನುದಾನ ನೀಡುತ್ತಿಲ್ಲ ಈಗಾದರೆ ನಾನು ವಾರ್ಡಿನಲ್ಲಿ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಹಾಗೂ ಹಿಂದೆ ಮಾಡಿರುವ ಕೆಲಸಗಳ ಬಿಲ್ ಗಳನ್ನು ಸಹ ತಡೆಹಿಡಿದು ಮಾನಸಿಕವಾಗಿ ಕುಗ್ಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಇದರಿಂದಾಗಿ ನನಗೆ ನ್ಯಾಯ ಬೇಕೇ ಬೇಕೆಂದು ಈ ಸತ್ಯಾಗ್ರಹವನ್ನು ನಡೆಸಲು ಮುಂದಾಗಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ನಿನ್ನೆ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಉನ್ನತ ಅಧಿಕಾರಿಗಳು, ರಾಜಕೀಯ ನಾಯಕರು, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂದು ಬರೀ ಟೊಳ್ಳು ಮಾತನಾಡಿದರೆ ಸಾಲದು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡವರನ್ನು ಸರಿ ಸಮಾನ ಅವಕಾಶಗಳು ದೊರಕಿಸಬೇಕು ಈ ರೀತಿ ಒಬ್ಬ ಗ್ರಾ.ಪಂ. ಮಹಿಳಾ ಸದಸ್ಯೆಯನ್ನು ದೌರ್ಜನ್ಯವಾಗಿ ನಡೆಸಿಕೊಂಡರೆ ಸರಿಯೇ ಮುಂದೆ ಈ ಘಟನೆಗಳು ಕಂಡು ಬಂದರೆ ಪ್ರತ್ಯಕ್ಷವಾಗಿ ಇವರ ಹೋರಾಟಕ್ಕೆ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಲಾಗುವುದು ಎಂದು ವಕೀಲ ಹನುಮಂತಪ್ಪ ಹಾಗೂ ರೈತ ಮುಖಂಡ ಗುಡಿಯಾರ ಮಲ್ಲಿಕಾರ್ಜುನ ನವರು ತಿಳಿಸಿದರು.

ನಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಕುಮಾರ್ ರವರು ಅಂಬಳಿ ಗ್ರಾಮ ಪಂಚಾಯಿತಿ ಪಿ ಡಿ ಒ ರವರನ್ನು ಸ್ಥಳಕ್ಕೆ ಕರೆಸಿ ವಾಸ್ತವ ಬಗ್ಗೆ ಚರ್ಚಿಸಿ ಇನ್ನು ಮುಂದೆ ಸಾಮಾನ್ಯ ಸಭೆಯಲ್ಲಿ ಪೊಲೀಸ್ ಸಹಾಯ ಪಡೆದು ಸಭೆಯನ್ನು ಮುಂದುವರೆಸಬೇಕು ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರು ಮಾತ್ರ ಪರಿಗಣಿಸಬೇಕು ಬೇರೆಯವರು ಸಭೆಯಲ್ಲಿ ಹಸ್ತಕ್ಷೇಪ ಮಾಡದಂತೆ ಸಭೆಯನ್ನು ನಡೆಸಬೇಕೆಂದು ಹೇಳಿದರು ಹಾಗೂ ಸದಸ್ಯೆ ಲಲಿತಮ್ಮ ನವರು ಮಾಡಿರುವ ಕೆಲಸ ಅಧಿಕೃತ ದಾಖಲೆಗಳನ್ನು ಪಡೆದು ಬೇಗನೆ ಬಿಲ್ ಮಾಡುವಂತೆ ಸೂಚಿಸಿದರು, ಅಧ್ಯಕ್ಷರನ್ನು ಸದಸ್ಯರು ಬಿಟ್ಟು ಅವರ ಸಂಬಂಧಿಕರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು ಇದು ಏನಾದರು ಮುಂದುವರೆದರೆ ಪೊಲೀಸ್ ದೂರು ನೀಡಿ ಎಂದು ಖಡಕ್ ಸೂಚನೆ ನೀಡಿದರು. ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿ ಧರಣಿಯನ್ನು ಹಿಂಪಡೆಯುವಂತೆ ಹೇಳಿದರು ಮಾನ್ಯ ಅಧಿಕಾರಿಗಳು ಸ್ಪಂದಿಸಿ ಧರಣಿಯನ್ನು ಹಿಂಪಡೆಯಲಾಯಿತು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago