Latest

ಗ್ರಾ.ಪಂ ಆಡಳಿತದಲ್ಲಿ ಪತ್ನಿಯ ಬದಲು ಪತಿಯ ಹಸ್ತಕ್ಷೇಪದಿಂದ ಮಾನಸಿಕ ಕಿರುಕುಳ; ಗ್ರಾ.ಪಂ ಸದಸ್ಯೆ ತಾಲೂಕು ಪಂಚಾಯತ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ.

ಕೊಟ್ಟೂರು:- ಅಂಬಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಹೊಳಲಮ್ಮ ನವರ ಪತಿ ಹನುಮಂತಪ್ಪ ಎಂಬುವವರ ಅಧಿಕಾರದ ಹಸ್ತಕ್ಷೇಪದಿಂದಾಗಿ ನನಗೆ ಮಾನಸಿಕ ಕಿರುಕುಳ ಉಂಟಾಗುತ್ತಿದೆ ಹಾಗೂ ಅನುದಾನದಲ್ಲಿ ತಾರತಮ್ಯವಾಗುತ್ತಿದೆ ಎಂದು ಕುಡಿತಿನಮಗ್ಗಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಲಲಿತ ಕಾಳಚಾರಿ ಯವರು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಕುರಿತು ಮಾತನಾಡಿದ ಅವರು
ನನಗೆ ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಯಾವುದೇ ಸಭೆಯಲ್ಲಿ ಆಗಲಿ ಅಥವಾ ಲೆಕ್ಕ ಪುಸ್ತಕದ ಬಗ್ಗೆ ಆಗಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಇದರ ಬಗ್ಗೆ ಕೇಳಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯವರ ಗಂಡ ಹನುಮಂತಪ್ಪ ನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ ನನಗೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಬೆದರಿಸುವ ಪ್ರಯತ್ನ ಮಾಡುತ್ತಾರೆ.ಇದರ ಸಂಬಂಧ ನನಗೆ ಯಾವುದೇ ಅನುದಾನ ನೀಡುತ್ತಿಲ್ಲ ಈಗಾದರೆ ನಾನು ವಾರ್ಡಿನಲ್ಲಿ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಹಾಗೂ ಹಿಂದೆ ಮಾಡಿರುವ ಕೆಲಸಗಳ ಬಿಲ್ ಗಳನ್ನು ಸಹ ತಡೆಹಿಡಿದು ಮಾನಸಿಕವಾಗಿ ಕುಗ್ಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಇದರಿಂದಾಗಿ ನನಗೆ ನ್ಯಾಯ ಬೇಕೇ ಬೇಕೆಂದು ಈ ಸತ್ಯಾಗ್ರಹವನ್ನು ನಡೆಸಲು ಮುಂದಾಗಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.

ನಿನ್ನೆ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಉನ್ನತ ಅಧಿಕಾರಿಗಳು, ರಾಜಕೀಯ ನಾಯಕರು, ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂದು ಬರೀ ಟೊಳ್ಳು ಮಾತನಾಡಿದರೆ ಸಾಲದು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡವರನ್ನು ಸರಿ ಸಮಾನ ಅವಕಾಶಗಳು ದೊರಕಿಸಬೇಕು ಈ ರೀತಿ ಒಬ್ಬ ಗ್ರಾ.ಪಂ. ಮಹಿಳಾ ಸದಸ್ಯೆಯನ್ನು ದೌರ್ಜನ್ಯವಾಗಿ ನಡೆಸಿಕೊಂಡರೆ ಸರಿಯೇ ಮುಂದೆ ಈ ಘಟನೆಗಳು ಕಂಡು ಬಂದರೆ ಪ್ರತ್ಯಕ್ಷವಾಗಿ ಇವರ ಹೋರಾಟಕ್ಕೆ ನಮ್ಮ ಸಂಘಟನೆಯಿಂದ ಬೆಂಬಲ ಸೂಚಿಸಲಾಗುವುದು ಎಂದು ವಕೀಲ ಹನುಮಂತಪ್ಪ ಹಾಗೂ ರೈತ ಮುಖಂಡ ಗುಡಿಯಾರ ಮಲ್ಲಿಕಾರ್ಜುನ ನವರು ತಿಳಿಸಿದರು.

ನಂತರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಕುಮಾರ್ ರವರು ಅಂಬಳಿ ಗ್ರಾಮ ಪಂಚಾಯಿತಿ ಪಿ ಡಿ ಒ ರವರನ್ನು ಸ್ಥಳಕ್ಕೆ ಕರೆಸಿ ವಾಸ್ತವ ಬಗ್ಗೆ ಚರ್ಚಿಸಿ ಇನ್ನು ಮುಂದೆ ಸಾಮಾನ್ಯ ಸಭೆಯಲ್ಲಿ ಪೊಲೀಸ್ ಸಹಾಯ ಪಡೆದು ಸಭೆಯನ್ನು ಮುಂದುವರೆಸಬೇಕು ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರು ಮಾತ್ರ ಪರಿಗಣಿಸಬೇಕು ಬೇರೆಯವರು ಸಭೆಯಲ್ಲಿ ಹಸ್ತಕ್ಷೇಪ ಮಾಡದಂತೆ ಸಭೆಯನ್ನು ನಡೆಸಬೇಕೆಂದು ಹೇಳಿದರು ಹಾಗೂ ಸದಸ್ಯೆ ಲಲಿತಮ್ಮ ನವರು ಮಾಡಿರುವ ಕೆಲಸ ಅಧಿಕೃತ ದಾಖಲೆಗಳನ್ನು ಪಡೆದು ಬೇಗನೆ ಬಿಲ್ ಮಾಡುವಂತೆ ಸೂಚಿಸಿದರು, ಅಧ್ಯಕ್ಷರನ್ನು ಸದಸ್ಯರು ಬಿಟ್ಟು ಅವರ ಸಂಬಂಧಿಕರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು ಇದು ಏನಾದರು ಮುಂದುವರೆದರೆ ಪೊಲೀಸ್ ದೂರು ನೀಡಿ ಎಂದು ಖಡಕ್ ಸೂಚನೆ ನೀಡಿದರು. ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿ ಧರಣಿಯನ್ನು ಹಿಂಪಡೆಯುವಂತೆ ಹೇಳಿದರು ಮಾನ್ಯ ಅಧಿಕಾರಿಗಳು ಸ್ಪಂದಿಸಿ ಧರಣಿಯನ್ನು ಹಿಂಪಡೆಯಲಾಯಿತು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

2 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

2 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

2 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

2 hours ago