Cinema

Metoo ಎಂಬುದು ಸುಳ್ಳು, ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೇ: ರೇಖಾ ನಾಯರ್ ಶಾಕಿಂಗ್‌ ಹೇಳಿಕೆ

ಇತ್ತೀಚಿನ ದಿನಗಳಲ್ಲಿ ನಟಿ ರೇಖಾ ನಾಯರ್‌ ತಮ್ಮ ಧೈರ್ಯಶಾಲಿ ಮಾತುಗಳಿಂದ ಗಮನಸೆಳೆದಿದ್ದಾರೆ. ಪಾರ್ಥಿಬನ್ ನಿರ್ದೇಶಿಸಿದ ಇರಾವಿನ್ ಸೈತೋ ಚಿತ್ರದಲ್ಲಿ ರಾಣಿ ಪಾತ್ರವನ್ನು ನಿರ್ವಹಿಸಿರುವ ರೇಖಾ, ನಗ್ನ ದೃಶ್ಯದ ಮೂಲಕ ಚರ್ಚೆಯ ಕೇಂದ್ರಬಿಂದುಗೊಂಡಿದ್ದಾರೆ. ತಾಯಿಯ ಎದೆಗೆ ಮಗು ಹಾಲು ಕುಡಿಯುವ ದೃಶ್ಯದಲ್ಲಿನ ಅವರ ಪಾತ್ರದ ಮೇಲೆ ಒಂದೆಡೆ ಪ್ರಶಂಸೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ತೀವ್ರ ಟೀಕೆಯನ್ನೂ ಅವರು ಎದುರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೇಖಾ ನಾಯರ್, “ಕಲೆಯನ್ನು ಕಲೆಯಾಗಿ ನೋಡಬೇಕು. ನಾನು ನಟಿಸಿದ ದೃಶ್ಯವು ಮನಕಲಕುವಂತದ್ದು. ಬೆತ್ತಲೆಯಾಗಿ ನಟಿಸಿದ್ದಕ್ಕೆ ಪ್ರಶಂಸೆಯೊಂದಿಗೆ ಟೀಕೆಯೂ ಬಂದಿವೆ. ಸಂಭಾವನೆಗೆ ಏನಾದರೂ ಮಾಡುತ್ತೀರಾ ಎಂದು ಕೇಳುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕಲೆಯ ಮಹತ್ವವನ್ನು ಅರ್ಥಮಾಡಿಕೊಳ್ಳದವರಿಗೆ ನಾನು ವಿವರಣೆ ನೀಡುವುದಿಲ್ಲ,” ಎಂದರು.

ಇದೇ ವೇಳೆ, ಇತ್ತೀಚೆಗೆ ಚಿತ್ರರಂಗದಲ್ಲಿ ಕೇಳಿಬರುತ್ತಿರುವ “ಅಡ್ಜಸ್ಟ್‌ಮೆಂಟ್” ವಿವಾದದ ಬಗ್ಗೆ ರೇಖಾ ತಮ್ಮ ನಿಲುವು ಸ್ಪಷ್ಟಪಡಿಸಿದರು. ಖಾಸಗಿ ಯೂಟ್ಯೂಬ್ ಚಾನೆಲ್‌ನ ಸಂದರ್ಶನದಲ್ಲಿ ನಟಿ ಶಕೀಲಾ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾ, “Metoo ಎಂಬುದು ಸುಳ್ಳು. ಯಾರಾದರೂ ನಿಮಗೆ ಕರೆ ಮಾಡಿದರೆ, ನೀವು ಹೋಗಲು ಬಯಸಿದರೆ ಹೋಗಬಹುದು, ಅಥವಾ ನಿರಾಕರಿಸಬಹುದು. ನಾವು ಬುದ್ಧಿಯಿಲ್ಲದ ಮಕ್ಕಳು ಅಲ್ಲ, ಯಾರು ಏನು ಮಾತನಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತದೆ. 10 ವರ್ಷಗಳ ನಂತರ ನಾನು ಚಿತ್ರರಂಗಕ್ಕೆ ಮರಳಿದ್ದೇನೆ,” ಎಂದು ಹೇಳಿದ್ದಾರೆ.

ಅಡ್ಜಸ್ಟ್‌ಮೆಂಟ್‌ ಕುರಿತಾಗಿ ತಮ್ಮ ಅನುಭವ ಹಂಚಿಕೊಂಡ ರೇಖಾ, “ಯಾವ ನಿರ್ದೇಶಕರೂ ನನ್ನ ಮೇಲೆ ‘ಅಡ್ಜಸ್ಟ್‌ಮೆಂಟ್’ ಮಾಡಲು ಒತ್ತಾಯಿಸಿಲ್ಲ. ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೆ. ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ನಮ್ಮ ಹೆಂಗಸರು ಚಪ್ಪಲಿ ತೆಗೆದು ಥಳಿಸಬಹುದು,” ಎಂದು ತಮ್ಮ ನೇರ ನಿಲುವು ವ್ಯಕ್ತಪಡಿಸಿದರು.

ರೇಖಾ ನಾಯರ್‌ನ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಚಿತ್ರರಂಗದಲ್ಲಿ ಉದಯೋನ್ಮುಖ ಪ್ರತಿಭೆಯ ಹೆಂಗಸರ ಸ್ಥಾನವನ್ನು ಮತ್ತೊಮ್ಮೆ ಮುನ್ನಲೆಗೆ ತಂದಿವೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago