Cinema

Metoo ಎಂಬುದು ಸುಳ್ಳು, ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೇ: ರೇಖಾ ನಾಯರ್ ಶಾಕಿಂಗ್‌ ಹೇಳಿಕೆ

ಇತ್ತೀಚಿನ ದಿನಗಳಲ್ಲಿ ನಟಿ ರೇಖಾ ನಾಯರ್‌ ತಮ್ಮ ಧೈರ್ಯಶಾಲಿ ಮಾತುಗಳಿಂದ ಗಮನಸೆಳೆದಿದ್ದಾರೆ. ಪಾರ್ಥಿಬನ್ ನಿರ್ದೇಶಿಸಿದ ಇರಾವಿನ್ ಸೈತೋ ಚಿತ್ರದಲ್ಲಿ ರಾಣಿ ಪಾತ್ರವನ್ನು ನಿರ್ವಹಿಸಿರುವ ರೇಖಾ, ನಗ್ನ ದೃಶ್ಯದ ಮೂಲಕ ಚರ್ಚೆಯ ಕೇಂದ್ರಬಿಂದುಗೊಂಡಿದ್ದಾರೆ. ತಾಯಿಯ ಎದೆಗೆ ಮಗು ಹಾಲು ಕುಡಿಯುವ ದೃಶ್ಯದಲ್ಲಿನ ಅವರ ಪಾತ್ರದ ಮೇಲೆ ಒಂದೆಡೆ ಪ್ರಶಂಸೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ತೀವ್ರ ಟೀಕೆಯನ್ನೂ ಅವರು ಎದುರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೇಖಾ ನಾಯರ್, “ಕಲೆಯನ್ನು ಕಲೆಯಾಗಿ ನೋಡಬೇಕು. ನಾನು ನಟಿಸಿದ ದೃಶ್ಯವು ಮನಕಲಕುವಂತದ್ದು. ಬೆತ್ತಲೆಯಾಗಿ ನಟಿಸಿದ್ದಕ್ಕೆ ಪ್ರಶಂಸೆಯೊಂದಿಗೆ ಟೀಕೆಯೂ ಬಂದಿವೆ. ಸಂಭಾವನೆಗೆ ಏನಾದರೂ ಮಾಡುತ್ತೀರಾ ಎಂದು ಕೇಳುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕಲೆಯ ಮಹತ್ವವನ್ನು ಅರ್ಥಮಾಡಿಕೊಳ್ಳದವರಿಗೆ ನಾನು ವಿವರಣೆ ನೀಡುವುದಿಲ್ಲ,” ಎಂದರು.

ಇದೇ ವೇಳೆ, ಇತ್ತೀಚೆಗೆ ಚಿತ್ರರಂಗದಲ್ಲಿ ಕೇಳಿಬರುತ್ತಿರುವ “ಅಡ್ಜಸ್ಟ್‌ಮೆಂಟ್” ವಿವಾದದ ಬಗ್ಗೆ ರೇಖಾ ತಮ್ಮ ನಿಲುವು ಸ್ಪಷ್ಟಪಡಿಸಿದರು. ಖಾಸಗಿ ಯೂಟ್ಯೂಬ್ ಚಾನೆಲ್‌ನ ಸಂದರ್ಶನದಲ್ಲಿ ನಟಿ ಶಕೀಲಾ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾ, “Metoo ಎಂಬುದು ಸುಳ್ಳು. ಯಾರಾದರೂ ನಿಮಗೆ ಕರೆ ಮಾಡಿದರೆ, ನೀವು ಹೋಗಲು ಬಯಸಿದರೆ ಹೋಗಬಹುದು, ಅಥವಾ ನಿರಾಕರಿಸಬಹುದು. ನಾವು ಬುದ್ಧಿಯಿಲ್ಲದ ಮಕ್ಕಳು ಅಲ್ಲ, ಯಾರು ಏನು ಮಾತನಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತದೆ. 10 ವರ್ಷಗಳ ನಂತರ ನಾನು ಚಿತ್ರರಂಗಕ್ಕೆ ಮರಳಿದ್ದೇನೆ,” ಎಂದು ಹೇಳಿದ್ದಾರೆ.

ಅಡ್ಜಸ್ಟ್‌ಮೆಂಟ್‌ ಕುರಿತಾಗಿ ತಮ್ಮ ಅನುಭವ ಹಂಚಿಕೊಂಡ ರೇಖಾ, “ಯಾವ ನಿರ್ದೇಶಕರೂ ನನ್ನ ಮೇಲೆ ‘ಅಡ್ಜಸ್ಟ್‌ಮೆಂಟ್’ ಮಾಡಲು ಒತ್ತಾಯಿಸಿಲ್ಲ. ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೆ. ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ನಮ್ಮ ಹೆಂಗಸರು ಚಪ್ಪಲಿ ತೆಗೆದು ಥಳಿಸಬಹುದು,” ಎಂದು ತಮ್ಮ ನೇರ ನಿಲುವು ವ್ಯಕ್ತಪಡಿಸಿದರು.

ರೇಖಾ ನಾಯರ್‌ನ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಚಿತ್ರರಂಗದಲ್ಲಿ ಉದಯೋನ್ಮುಖ ಪ್ರತಿಭೆಯ ಹೆಂಗಸರ ಸ್ಥಾನವನ್ನು ಮತ್ತೊಮ್ಮೆ ಮುನ್ನಲೆಗೆ ತಂದಿವೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

9 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

10 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

10 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

12 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

13 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

16 hours ago