Cinema

Metoo ಎಂಬುದು ಸುಳ್ಳು, ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೇ: ರೇಖಾ ನಾಯರ್ ಶಾಕಿಂಗ್‌ ಹೇಳಿಕೆ

ಇತ್ತೀಚಿನ ದಿನಗಳಲ್ಲಿ ನಟಿ ರೇಖಾ ನಾಯರ್‌ ತಮ್ಮ ಧೈರ್ಯಶಾಲಿ ಮಾತುಗಳಿಂದ ಗಮನಸೆಳೆದಿದ್ದಾರೆ. ಪಾರ್ಥಿಬನ್ ನಿರ್ದೇಶಿಸಿದ ಇರಾವಿನ್ ಸೈತೋ ಚಿತ್ರದಲ್ಲಿ ರಾಣಿ ಪಾತ್ರವನ್ನು ನಿರ್ವಹಿಸಿರುವ ರೇಖಾ, ನಗ್ನ ದೃಶ್ಯದ ಮೂಲಕ ಚರ್ಚೆಯ ಕೇಂದ್ರಬಿಂದುಗೊಂಡಿದ್ದಾರೆ. ತಾಯಿಯ ಎದೆಗೆ ಮಗು ಹಾಲು ಕುಡಿಯುವ ದೃಶ್ಯದಲ್ಲಿನ ಅವರ ಪಾತ್ರದ ಮೇಲೆ ಒಂದೆಡೆ ಪ್ರಶಂಸೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ತೀವ್ರ ಟೀಕೆಯನ್ನೂ ಅವರು ಎದುರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೇಖಾ ನಾಯರ್, “ಕಲೆಯನ್ನು ಕಲೆಯಾಗಿ ನೋಡಬೇಕು. ನಾನು ನಟಿಸಿದ ದೃಶ್ಯವು ಮನಕಲಕುವಂತದ್ದು. ಬೆತ್ತಲೆಯಾಗಿ ನಟಿಸಿದ್ದಕ್ಕೆ ಪ್ರಶಂಸೆಯೊಂದಿಗೆ ಟೀಕೆಯೂ ಬಂದಿವೆ. ಸಂಭಾವನೆಗೆ ಏನಾದರೂ ಮಾಡುತ್ತೀರಾ ಎಂದು ಕೇಳುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕಲೆಯ ಮಹತ್ವವನ್ನು ಅರ್ಥಮಾಡಿಕೊಳ್ಳದವರಿಗೆ ನಾನು ವಿವರಣೆ ನೀಡುವುದಿಲ್ಲ,” ಎಂದರು.

ಇದೇ ವೇಳೆ, ಇತ್ತೀಚೆಗೆ ಚಿತ್ರರಂಗದಲ್ಲಿ ಕೇಳಿಬರುತ್ತಿರುವ “ಅಡ್ಜಸ್ಟ್‌ಮೆಂಟ್” ವಿವಾದದ ಬಗ್ಗೆ ರೇಖಾ ತಮ್ಮ ನಿಲುವು ಸ್ಪಷ್ಟಪಡಿಸಿದರು. ಖಾಸಗಿ ಯೂಟ್ಯೂಬ್ ಚಾನೆಲ್‌ನ ಸಂದರ್ಶನದಲ್ಲಿ ನಟಿ ಶಕೀಲಾ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾ, “Metoo ಎಂಬುದು ಸುಳ್ಳು. ಯಾರಾದರೂ ನಿಮಗೆ ಕರೆ ಮಾಡಿದರೆ, ನೀವು ಹೋಗಲು ಬಯಸಿದರೆ ಹೋಗಬಹುದು, ಅಥವಾ ನಿರಾಕರಿಸಬಹುದು. ನಾವು ಬುದ್ಧಿಯಿಲ್ಲದ ಮಕ್ಕಳು ಅಲ್ಲ, ಯಾರು ಏನು ಮಾತನಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತದೆ. 10 ವರ್ಷಗಳ ನಂತರ ನಾನು ಚಿತ್ರರಂಗಕ್ಕೆ ಮರಳಿದ್ದೇನೆ,” ಎಂದು ಹೇಳಿದ್ದಾರೆ.

ಅಡ್ಜಸ್ಟ್‌ಮೆಂಟ್‌ ಕುರಿತಾಗಿ ತಮ್ಮ ಅನುಭವ ಹಂಚಿಕೊಂಡ ರೇಖಾ, “ಯಾವ ನಿರ್ದೇಶಕರೂ ನನ್ನ ಮೇಲೆ ‘ಅಡ್ಜಸ್ಟ್‌ಮೆಂಟ್’ ಮಾಡಲು ಒತ್ತಾಯಿಸಿಲ್ಲ. ಗಂಡಸರು ಹಣ ಕೊಡುತ್ತಿದ್ದಾರೆ, ಹೆಂಗಸರು ಎಂಜಾಯ್ ಮಾಡುತ್ತಿದ್ದಾರೆ ಅಷ್ಟೆ. ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ನಮ್ಮ ಹೆಂಗಸರು ಚಪ್ಪಲಿ ತೆಗೆದು ಥಳಿಸಬಹುದು,” ಎಂದು ತಮ್ಮ ನೇರ ನಿಲುವು ವ್ಯಕ್ತಪಡಿಸಿದರು.

ರೇಖಾ ನಾಯರ್‌ನ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಚಿತ್ರರಂಗದಲ್ಲಿ ಉದಯೋನ್ಮುಖ ಪ್ರತಿಭೆಯ ಹೆಂಗಸರ ಸ್ಥಾನವನ್ನು ಮತ್ತೊಮ್ಮೆ ಮುನ್ನಲೆಗೆ ತಂದಿವೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago