ದಾವಣಗೆರೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿರಂತರವಾಗಿ ಬೆಳೆಯುತ್ತಿದ್ದು, ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರಾಜ್ಯ ಸರ್ಕಾರ ಈಗಾಗಲೇ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿಗೆ ತಂದಿರುವುದಕ್ಕೂ ಕೆಲವು ಸಂಸ್ಥೆಗಳ ಸಿಬ್ಬಂದಿ ಸಾಲದ ಬಾಕಿ ವಸೂಲಿಗಾಗಿ ಕ್ರೂರ ಹತ್ತಿರಗಳನ್ನು ಅನುಸರಿಸುತ್ತಿದ್ದಾರೆ.
ಗ್ರಾಮ ತೊರೆದು ಬೇರೆಡೆಗೆ ತೆರಳಿದ ಕುಟುಂಬಗಳು
ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ಹಲವಾರು ಕುಟುಂಬಗಳು ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಾಳಲಾರದ ಸ್ಥಿತಿಗೆ ತಲುಪಿದ್ದು, ಊರನ್ನು ತೊರೆದು ಬೇರೆಡೆಗೆ ವಲಸೆ ಹೋಗಿದ್ದಾರೆ. ಮೂಲಗಳ ಪ್ರಕಾರ, ₹50,000 ರಿಂದ ₹1 ಲಕ್ಷದವರೆಗೆ ಸಾಲ ಪಡೆದ ಕುಟುಂಬಗಳು ಹಣ ಮರುಪಾವತಿಗೆ ನಿರಂತರ ಒತ್ತಡಕ್ಕೆ ಒಳಗಾಗಿದ್ದರು. ಹಣ ಕಟ್ಟಿ ಕೊಡುವಂತೆ ಒತ್ತಾಯಿಸುವ ಫೈನಾನ್ಸ್ ಸಿಬ್ಬಂದಿ, ಸಾಲಗಾರರನ್ನು ಪೊಲೀಸ್ ಠಾಣೆಗೆ ಕರೆಸಿ ಬೆದರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
“ನಾವೇನು ಮಾಡೋದು? ಸಾಲ ಮಾಡಿರೋದು ಬದುಕಿಗಾಗಿ. ಆದರೆ ಇದ್ಯಾವ ರೀತಿ ಬದುಕೋ? ಹತ್ತಿರದವರ ಬಳಿ ಕೈಕಾಲು ಹಿಡಿದು ಸಾಲ ತಂದುಕೊಡುವಂತೆ ಒತ್ತಾಯ ಮಾಡ್ತಾರೆ. ತಾಳಲಾರದ ಸ್ಥಿತಿಗೆ ಬಂದಿದ್ದೇವೆ,” ಎಂದು ಸ್ಥಳೀಯರೊಬ್ಬರು ಅಳಲಿಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಾನಸಿಕ ಹಿಂಸೆ, ಆತ್ಮಹತ್ಯೆ
ಕೇವಲ ಗ್ರಾಮ ತೊರೆದು ಹೋಗುವಷ್ಟೇ ಅಲ್ಲ, ಮೈಕ್ರೋ ಫೈನಾನ್ಸ್ ನವರ ಕಿರುಕುಳವು ಜೀವಹಾನಿಗೂ ಕಾರಣವಾಗುತ್ತಿದೆ. ಖಾನಾಪುರದಲ್ಲಿ ಕಿರುಕುಳದಿಂದ ಮನನೊಂದು ಓರ್ವ ಸೆಂಟ್ರಿಂಗ್ ಕಾರ್ಮಿಕನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸಾಲದ ಬಾಧೆ, ನಿರಂತರ ಬೆದರಿಕೆ, ಮಾನಸಿಕ ಒತ್ತಡ ಇವುಗಳು ಈ ದುಃಖದ ಸಂಗತಿಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದವೆಂದು ತಿಳಿದುಬಂದಿದೆ.
ಸರ್ಕಾರದ ಕ್ರಮ ಮತ್ತು ಜನರ ನಿರೀಕ್ಷೆ
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದರಿಂದ ಇಂತಹ ದೌರ್ಜನ್ಯಗಳಿಗೆ ಕಡಿವಾಣ ಬಿದ್ದಿರಬೇಕು. ಆದರೆ ಇನ್ನೂ ಜಾರಿಗೆ ಬಂದಿರುವ ನಿಯಮಗಳನ್ನು ಪರಿಣಾಮಕಾರಿಯಾಗಿ ಪಾಲಿಸದೇ ಇದ್ದಾಗ, ಗ್ರಾಮೀಣ ಪ್ರದೇಶಗಳ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಸಾಲ ಪಡೆಯುವುದು ಜನರ ಬದುಕಿಗಾಗಿ, ಆದರೆ ಅದೇ ಸಾಲ ಜೀವಕ್ಕೆ ಅಪಾಯವಾಗಬಾರದು. ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಜನಸಾಮಾನ್ಯರ ಆಗ್ರಹ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…