ದಾವಣಗೆರೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿರಂತರವಾಗಿ ಬೆಳೆಯುತ್ತಿದ್ದು, ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರಾಜ್ಯ ಸರ್ಕಾರ ಈಗಾಗಲೇ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿಗೆ ತಂದಿರುವುದಕ್ಕೂ ಕೆಲವು ಸಂಸ್ಥೆಗಳ ಸಿಬ್ಬಂದಿ ಸಾಲದ ಬಾಕಿ ವಸೂಲಿಗಾಗಿ ಕ್ರೂರ ಹತ್ತಿರಗಳನ್ನು ಅನುಸರಿಸುತ್ತಿದ್ದಾರೆ.
ಗ್ರಾಮ ತೊರೆದು ಬೇರೆಡೆಗೆ ತೆರಳಿದ ಕುಟುಂಬಗಳು
ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ಹಲವಾರು ಕುಟುಂಬಗಳು ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಾಳಲಾರದ ಸ್ಥಿತಿಗೆ ತಲುಪಿದ್ದು, ಊರನ್ನು ತೊರೆದು ಬೇರೆಡೆಗೆ ವಲಸೆ ಹೋಗಿದ್ದಾರೆ. ಮೂಲಗಳ ಪ್ರಕಾರ, ₹50,000 ರಿಂದ ₹1 ಲಕ್ಷದವರೆಗೆ ಸಾಲ ಪಡೆದ ಕುಟುಂಬಗಳು ಹಣ ಮರುಪಾವತಿಗೆ ನಿರಂತರ ಒತ್ತಡಕ್ಕೆ ಒಳಗಾಗಿದ್ದರು. ಹಣ ಕಟ್ಟಿ ಕೊಡುವಂತೆ ಒತ್ತಾಯಿಸುವ ಫೈನಾನ್ಸ್ ಸಿಬ್ಬಂದಿ, ಸಾಲಗಾರರನ್ನು ಪೊಲೀಸ್ ಠಾಣೆಗೆ ಕರೆಸಿ ಬೆದರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
“ನಾವೇನು ಮಾಡೋದು? ಸಾಲ ಮಾಡಿರೋದು ಬದುಕಿಗಾಗಿ. ಆದರೆ ಇದ್ಯಾವ ರೀತಿ ಬದುಕೋ? ಹತ್ತಿರದವರ ಬಳಿ ಕೈಕಾಲು ಹಿಡಿದು ಸಾಲ ತಂದುಕೊಡುವಂತೆ ಒತ್ತಾಯ ಮಾಡ್ತಾರೆ. ತಾಳಲಾರದ ಸ್ಥಿತಿಗೆ ಬಂದಿದ್ದೇವೆ,” ಎಂದು ಸ್ಥಳೀಯರೊಬ್ಬರು ಅಳಲಿಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಾನಸಿಕ ಹಿಂಸೆ, ಆತ್ಮಹತ್ಯೆ
ಕೇವಲ ಗ್ರಾಮ ತೊರೆದು ಹೋಗುವಷ್ಟೇ ಅಲ್ಲ, ಮೈಕ್ರೋ ಫೈನಾನ್ಸ್ ನವರ ಕಿರುಕುಳವು ಜೀವಹಾನಿಗೂ ಕಾರಣವಾಗುತ್ತಿದೆ. ಖಾನಾಪುರದಲ್ಲಿ ಕಿರುಕುಳದಿಂದ ಮನನೊಂದು ಓರ್ವ ಸೆಂಟ್ರಿಂಗ್ ಕಾರ್ಮಿಕನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸಾಲದ ಬಾಧೆ, ನಿರಂತರ ಬೆದರಿಕೆ, ಮಾನಸಿಕ ಒತ್ತಡ ಇವುಗಳು ಈ ದುಃಖದ ಸಂಗತಿಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದವೆಂದು ತಿಳಿದುಬಂದಿದೆ.
ಸರ್ಕಾರದ ಕ್ರಮ ಮತ್ತು ಜನರ ನಿರೀಕ್ಷೆ
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದರಿಂದ ಇಂತಹ ದೌರ್ಜನ್ಯಗಳಿಗೆ ಕಡಿವಾಣ ಬಿದ್ದಿರಬೇಕು. ಆದರೆ ಇನ್ನೂ ಜಾರಿಗೆ ಬಂದಿರುವ ನಿಯಮಗಳನ್ನು ಪರಿಣಾಮಕಾರಿಯಾಗಿ ಪಾಲಿಸದೇ ಇದ್ದಾಗ, ಗ್ರಾಮೀಣ ಪ್ರದೇಶಗಳ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಸಾಲ ಪಡೆಯುವುದು ಜನರ ಬದುಕಿಗಾಗಿ, ಆದರೆ ಅದೇ ಸಾಲ ಜೀವಕ್ಕೆ ಅಪಾಯವಾಗಬಾರದು. ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಜನಸಾಮಾನ್ಯರ ಆಗ್ರಹ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…