ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಅತ್ಯಾಚಾರ ಯತ್ನ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯವನ್ನು ಐಐಎಫ್ ಎಲ್ ಕಂಪನಿಗೆ ಸೇರಿರುವ ‘ಸಮಸ್ತ’ ಮೈಕ್ರೋಫೈನಾನ್ಸ್ ಸಂಸ್ಥೆಯ ಉದ್ಯೋಗಿ ಕಿರಣ್ (24) ಎಂಬಾತ ಎಸಗಿದ್ದಾನೆ.
ಘಟನೆಯ ವಿವರಗಳ ಪ್ರಕಾರ, ಈತ ಸಾಲ ವಸೂಲಿಗಾಗಿ ಹಂದನಕೆರೆಯೊಂದಿನ ಮನೆಗೆ ಭೇಟಿ ನೀಡಿದ್ದ ವೇಳೆ ಬಾಲಕಿ ಒಬ್ಬಳೇ ಮನೆಯಲ್ಲಿದ್ದುದನ್ನು ಗಮನಿಸಿದನು. ಈ ವೇಳೆ ತನ್ನ ಅಹಿತಕರ ಉದ್ದೇಶಗಳನ್ನು ಹುರಿದುಂಬಿಸಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆಸಿದ್ದಾನೆ. ಬಾಲಕಿ ಕಿರುಚಲು ಪ್ರಾರಂಭಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಬಾಲಕಿ ಗಾಯಗೊಂಡಿದ್ದು, ಕುತ್ತಿಗೆ, ಬುಜು ಸೇರಿದಂತೆ ಹಲವು ಭಾಗಗಳಲ್ಲಿ ಗಾಯಗಳಾಗಿವೆ. ಕುಟುಂಬಸ್ಥರು ವಿಷಯವನ್ನು ಹಂದನಕರೆ ಪೊಲೀಸ್ ಠಾಣೆಗೆ ವರದಿ ಮಾಡಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ದುಷ್ಕರ್ಮಿಯ ಹೆಡೆಮುರಿ ಕಟ್ಟಿ ಎರಡೇ ದಿನಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯದಲ್ಲಿ ಆರೋಪಿಯಾಗಿರುವ ಕಿರಣ್ ಈ ಸಂದರ್ಭದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…