ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ ಕಳ್ಳರು ಎಟಿಎಂಗೆ ನುಗ್ಗಿ, ಗ್ಯಾಸ್ ಕಟರ್ ಬಳಸಿ ಯಂತ್ರವನ್ನು ಮುರಿದು ₹75,600 ದೋಚಿದ ಘಟನೆ ನಡೆದಿದೆ. ಪ್ರಮುಖ ಮಾರ್ಗದಲ್ಲಿರುವ ಈ ಎಟಿಎಂ ಕೇಂದ್ರದ ಬಳಿ ಸದಾ ವಾಹನ ದಟ್ಟಣೆ ಇರುತ್ತದರೂ, ಈ ದರೋಡೆ ನಡೆಯುವುದು ಆಶ್ಚರ್ಯ ಉಂಟುಮಾಡಿದೆ.
ಏಳು ನಿಮಿಷದಲ್ಲಿ ಎಟಿಎಂ ಖಾಲಿ!
ತಡರಾತ್ರಿ ಮೂವರು ಮುಸುಕುಧಾರಿಗಳು ಎಟಿಎಂ ಕೇಂದ್ರಕ್ಕೆ ಪ್ರವೇಶಿಸಿ, ಮೊದಲಿಗೆ ಬಣ್ಣದ ಸ್ಪ್ರೇ ಬಳಸಿ ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿದರು. ಈ ವೇಳೆ, ಬ್ಯಾಂಕಿನ ಕಂಟ್ರೋಲ್ ರೂಂಗೆ ಅಲರ್ಟ್ ಹೋಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಆದರೆ, ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಳ್ಳರು ಕಣ್ಮರೆಯಾಗಿದ್ದರು.
ಪೊಲೀಸರ ಪರಿಶೀಲನೆ ಮತ್ತು ಮುಂದಿನ ಕ್ರಮ
ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಇರದೆ ಇದ್ದ ಕಾರಣ, ಕಳ್ಳರಿಗೆ ಸುಲಭವಾಗಿತ್ತಂತಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚಲು ಮೂರು ವಿಶೇಷ ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲೇ ಅವರ ಬಂಧನ ಸಾಧ್ಯವಿದೆ ಎಂದು ತಿಳಿಸಿದ್ದಾರೆ.
ಸುರಕ್ಷತೆಗಾಗಿ ಹೊಸ ಕ್ರಮಗಳು
ಇಂತಹ ಘಟನೆಗಳು ಪುನರಾವೃತವಾಗದಂತೆ ಎಟಿಎಂ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಪರಿಸರದಲ್ಲಿ ಹೆಚ್ಚಿನ ಗಸ್ತು ತಿರುಗಾಟದ ಮೂಲಕ ನಿಗಾ ಇರಿಸಲು, ನಾಗರಿಕರಿಗೆ ಕೂಡ ಎಟಿಎಂ ಬಳಕೆ ಸಮಯದಲ್ಲಿ ಎಚ್ಚರಿಕೆ ವಹಿಸಲು ಪೊಲೀಸರು ಮನವಿ ಮಾಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…