ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಿಲ್ಲೋದ್ ತಾಲೂಕಿನ ಹಳ್ಳಿಯೊಂದರಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಧ್ಯರಾತ್ರಿ ಮನೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವಿವಾಹಿತ ಮಹಿಳೆಯ ಮೇಲೆ ಗ್ಯಾಂಗ್ರೇಪ್ ನಡೆಸಿ, ಆಕೆಯ ಪತಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಮಹಿಳೆ ಮನೆಯಲ್ಲಿದ್ದ ವೇಳೆ ಆರೋಪಿಗಳು ಬಲವಂತವಾಗಿ ಒಳನುಗ್ಗಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಪತಿ, ಆರೋಪಿಗಳ ವಿರುದ್ಧ ಹೋರಾಟ ನಡೆಸಿ ಪತ್ನಿಯನ್ನು ರಕ್ಷಿಸಲು ಯತ್ನಿಸಿದ್ದಾರೆ.
ಈ ವೇಳೆ ಆರೋಪಿಗಳು ಪತಿಯನ್ನು ಮನಸೋಇಚ್ಛೆ ಥಳಿಸಿದ್ದು, ಈ ಹಲ್ಲೆ ಹಾಗೂ ಘಟನೆಯ ಆಘಾತದಿಂದ ಪತಿಗೆ ಹೃದಯಾಘಾತ ಉಂಟಾಗಿ ಸ್ಥಳದಲ್ಲೇ ಸಾವನ್ನಪ್ಪಿದರೆಂದು ತಿಳಿದುಬಂದಿದೆ.
ಘಟನೆ ನಂತರ ಧೈರ್ಯ ತೋರಿದ ಮಹಿಳೆ ಸಿಲ್ಲೋದ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…