ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ.
ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು. 3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.
ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…