ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospital ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವರಿಗೆ ತೀವ್ರ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದು, ಅವರ ಸ್ಥಿತಿ ಕಳವಳಕಾರಿಯಾಗಿದೆ. ಪ್ರಸ್ತುತ ಅವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರು ಯಶವಂತಪುರದ Manipal Hospital ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ.
ಆರಂಭದಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ವೈದ್ಯರ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ.
ಇನ್ನೂ ಅಗತ್ಯವಿದ್ದರೆ ಶ್ವಾಸಕೋಶ ಕಸಿ ಮಾಡುವ ಸಾಧ್ಯತೆಯ ಬಗ್ಗೆ ಕೂಡ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಸದ್ಯ ಸಚಿವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎನ್ನಲಾಗಿದ್ದು, ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…